23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ


ಅಳದಂಗಡಿ ವಲಯ ವ್ಯಾಪ್ತಿಯ ನಾವರ ಗ್ರಾಮದ ಉಂಬುಜೆ ಎಂಬಲ್ಲಿ ಕೊರಗಪ್ಪ ಮಲೆಕುಡಿಯ ದಂಪತಿಯ ಮನೆಯ ಮೇಲ್ಚಾವಣಿಯು ತೀರ ದುಸ್ಥಿತಿಯಲ್ಲಿದ್ದು. ಯಾವುದೇ ಸಮಯದಲ್ಲಿ ಬಿದ್ದು ಹೋಗುವ ಪರಿಸ್ಥಿತಿಯಲ್ಲಿತ್ತು. ದಂಪತಿಗಳಿಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು ಸ್ವತಂತ್ರವಾಗಿ ಯಾವುದೇ ಕೆಲಸಗಳನ್ನು ನೆರವೇರಿಸುವಲ್ಲಿ ಅಸಹಾಯಕರಾಗಿದ್ದರು. ದಂಪತಿಗಳಿಬ್ಬರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಪಕ್ಕದ ಮನೆಯವರು ಕಳುಹಿಸಿದ್ದು ಮನೆ ಖಾಲಿ ಆಗಿತ್ತು. ಇದೇ ಸಂದರ್ಭದಲ್ಲಿ ಮನೆಯ ದುರಸ್ತಿ ಕಾರ್ಯ ಮಾಡುವುದು ಒಳಿತೆಂದು ಮನಗಂಡು ವೃದ್ಧರ ಆರೈಕೆಯನ್ನು ಮಾಡುತ್ತಿದ್ದ ಅವರ ಸಹೋದರ ಸಂಬಂಧಿಗಳು. ಮನೆಯ ಛಾವಣಿ ತೆರವುಗೊಳಿಸುವಲ್ಲಿ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ನೆರವನ್ನು ಕೋರಿ ಮನವಿಯನ್ನು ಸಲ್ಲಿಸಿದ್ದರು.
ವಿಷಯವನ್ನು ವಲಯ ಮೇಲ್ವಿಚಾರಕರು ಹಾಗೂ ಯೋಜನಾಧಿಕಾರಿಗಳ ಗಮನಕ್ಕೆ ತಂದು ಮೇಲ್ಚಾವಣಿಯ ತೆರವು ಕಾರ್ಯವನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಘಟಕ ಪ್ರತಿನಿಧಿ ರಾಜೇಶ್ ಹಾಗೂ ಶ್ರೀಮತಿ ಶಕುಂತಲಾ, ಸ್ವಯಂ ಸೇವಕರಾದ ಪ್ರಕಾಶ್ ಕೊಲ್ಲಂಗೆ, ಶಿವಾನಂದ, ಶ್ರೀಕಾಂತ್, ಸರಸ್ವತಿ, ಹೇಮಾವತಿ, ಅಮಿತಾ ಹಾಗೂ ನಳಿನಿ ಸ್ವಯಂಸೇವಕರು ಭಾಗವಹಿಸಿದರು.

ಸ್ವಯಂ ಸೇವಕರೊಂದಿಗೆ ಈ ಕಾರ್ಯದಲ್ಲಿ ಸೋದರ ಸಂಬಂಧಿಗಳು ಸಹಕರಿಸಿದರು. ಸೇವಾ ಪ್ರತಿನಿಧಿ ಕುಮಾರಿ ಸುಲೋಚನಾರವರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya
error: Content is protected !!