September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಜು. 31 ರಂದು ಬೆಳ್ತಂಗಡಿ ಬಿಎಂಎಸ್ ಕಾರ್ಯಾಲಯದಲ್ಲಿ ಬಿಎಂಎಸ್ ಸ್ಥಾಪನೆ ದಿನಾಚರಣೆ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ್ ಬಿಕೆ ಬಂದಾರು ಇವರ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಸ್ಥಾಪನಾ ದಿನಾಚರಣೆಯ ಬಗ್ಗೆ ಬಿಎಂಎಸ್ ಜಿಲ್ಲೆಯ ಅಧ್ಯಕ್ಷ ಅನಿಲ್ ಕುಮಾರ್ ಯು ಮಾತನಾಡಿ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಕಾರ್ಮಿಕ ಬಂಧುಗಳು ಕೈಜೋಡಿಸಿ ಎಂದು ಮನವಿ ಮಾಡಿದರು.

ತಾಲೂಕು ಸೇವಾ ಪ್ರಮುಖವಾದ ವಿಜಯ್ ಅರಳಿ ಸ್ಥಾಪನೆ ದಿನಾಚರಣೆಯ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ತಾಲೂಕು ಬೀಡಿ ಮಜ್ದೂರ್ ಸಂಘದ ಸಹ ಸಂಚಾಲಕರಾದ ಶಶಿಕಲಾ ಕೊಯ್ಯೂರು , ತಾಲೂಕು ರಿಕ್ಷಾ ಯೂನಿಯನ್ ನ ಪ್ರಮುಖರು, ತಾಲೂಕಿನ ಬಿಎಂಎಸ್ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಮಿಕ ಬಂಧುಗಳು ಉಪಸ್ಥಿತರಿದ್ದರು.

ತಾಲೂಕು ಸಂಯೋಜಕರಾದ ಶಾಂತಪ್ಪ ಕಾರ್ಯಕ್ರಮ ನಿರೂಪಿಸಿ , ಸ್ವಾಗತಿಸಿದರು. ಬಿಎಂಎಸ್‌ ಕಟ್ಟಡ ಕಾರ್ಮಿಕ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರನಾಥ ಕಲ್ಮಂಜ ಧನ್ಯವಾದವಿತ್ತರು.

Related posts

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya
error: Content is protected !!