23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಜು. 31 ರಂದು ಬೆಳ್ತಂಗಡಿ ಬಿಎಂಎಸ್ ಕಾರ್ಯಾಲಯದಲ್ಲಿ ಬಿಎಂಎಸ್ ಸ್ಥಾಪನೆ ದಿನಾಚರಣೆ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ್ ಬಿಕೆ ಬಂದಾರು ಇವರ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಸ್ಥಾಪನಾ ದಿನಾಚರಣೆಯ ಬಗ್ಗೆ ಬಿಎಂಎಸ್ ಜಿಲ್ಲೆಯ ಅಧ್ಯಕ್ಷ ಅನಿಲ್ ಕುಮಾರ್ ಯು ಮಾತನಾಡಿ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಕಾರ್ಮಿಕ ಬಂಧುಗಳು ಕೈಜೋಡಿಸಿ ಎಂದು ಮನವಿ ಮಾಡಿದರು.

ತಾಲೂಕು ಸೇವಾ ಪ್ರಮುಖವಾದ ವಿಜಯ್ ಅರಳಿ ಸ್ಥಾಪನೆ ದಿನಾಚರಣೆಯ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ತಾಲೂಕು ಬೀಡಿ ಮಜ್ದೂರ್ ಸಂಘದ ಸಹ ಸಂಚಾಲಕರಾದ ಶಶಿಕಲಾ ಕೊಯ್ಯೂರು , ತಾಲೂಕು ರಿಕ್ಷಾ ಯೂನಿಯನ್ ನ ಪ್ರಮುಖರು, ತಾಲೂಕಿನ ಬಿಎಂಎಸ್ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಮಿಕ ಬಂಧುಗಳು ಉಪಸ್ಥಿತರಿದ್ದರು.

ತಾಲೂಕು ಸಂಯೋಜಕರಾದ ಶಾಂತಪ್ಪ ಕಾರ್ಯಕ್ರಮ ನಿರೂಪಿಸಿ , ಸ್ವಾಗತಿಸಿದರು. ಬಿಎಂಎಸ್‌ ಕಟ್ಟಡ ಕಾರ್ಮಿಕ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರನಾಥ ಕಲ್ಮಂಜ ಧನ್ಯವಾದವಿತ್ತರು.

Related posts

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya
error: Content is protected !!