37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

ಬೆಳ್ತಂಗಡಿ: ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಬಿಎಂಎಸ್ ನ ಸಂಯೋಜಿತ ವೆಹಿಕಲ್ ಯೂನಿಯನ್ ಗಳು ಸಾರಿಗೆ ಮಂತ್ರಿಗಳಾದ ರಾಮಲಿಂಗ ರೆಡ್ಡಿ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿ ಆಗ್ರಹಿಸಲಾಗಿತ್ತು. ರಾಜ್ಯದಾದ್ಯಂತ ಚಾಲಕ ಸಂಘಟನೆಗಳು‌ ಕೂಡ ಚಾಲಕರ ಸಮಸ್ಯೆಗಳನ್ನು ಸರ್ಕಾರ ಪರಿಹರಿಸುವಂತೆ ಅಗ್ರಹಿಸಿದ್ದವು.

ಈ ಪ್ರಯುಕ್ತ ಸಾರಿಗೆ ಆಯುಕ್ತರು ಬೆಂಗಳೂರು ಕಚೇರಿಯಲ್ಲಿ ಸಾರಿಗೆ ಒಕ್ಕೂಟದ ಸಂಘಟನೆಗಳ ಸಭೆಯನ್ನು ಕರೆದಿದ್ದು ಬೆಳ್ತಂಗಡಿ ತಾಲೂಕಿನ ರಿಕ್ಷಾ ಚಾಲಕ ಸಂಘದ ಪ್ರತಿನಿಧಿಗಳು ಈ ಸಭೆಯಲ್ಲಿ‌ ಭಾಗವಹಿಸಿದರು.

ಸಭೆಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರು ಹಾಗೂ ಸಾರಿಗೆ ಅಯುಕ್ತರು ಉಪಸ್ಥಿತರಿದ್ದರು. ರಿಕ್ಷಾ ಚಾಲಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಬಿಎಂಎಸ್ ವೆಹಿಕಲ್ ಯೂನಿಯನ್ ಪ್ರಮುಖರು .ಮುಖ್ಯವಾಗಿ ರಿಕ್ಷಾ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗೆ ಕಲ್ಯಾಣ ಮಂಡಳಿಯನ್ನು ರಚಿಸುವಂತೆ ಹಾಗೂ ಉಚಿತ ಆಸ್ಪತ್ರೆ ಚಿಕಿತ್ಸಾ ವೆಚ್ಚ, ಚಾಲಕರ ಮಕ್ಕಳಿಗೆ ಸ್ಕಾಲರ್ ಶಿಪ್ ,ಗೃಹ ನಿರ್ಮಾಣಕ್ಕೆ ಸಹಾಯಧನವನ್ನು ನೀಡುವಂತೆ, ವ್ರದ್ದಾಪ್ಯ ಪಿಂಚಣಿಯನ್ನು ನೀಡುವಂತೆ ಸಭೆಯಲ್ಲಿ ಅಗ್ರಹಿಸಲಾಯಿತು.

ಬೆಳ್ತಂಗಡಿ ತಾಲೂಕು ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಕೃಷ್ಣಬೆಳಾಲು, ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಗರ್ಡಾಡಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!