25.8 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

ಬೆಳ್ತಂಗಡಿ: ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಬಿಎಂಎಸ್ ನ ಸಂಯೋಜಿತ ವೆಹಿಕಲ್ ಯೂನಿಯನ್ ಗಳು ಸಾರಿಗೆ ಮಂತ್ರಿಗಳಾದ ರಾಮಲಿಂಗ ರೆಡ್ಡಿ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿ ಆಗ್ರಹಿಸಲಾಗಿತ್ತು. ರಾಜ್ಯದಾದ್ಯಂತ ಚಾಲಕ ಸಂಘಟನೆಗಳು‌ ಕೂಡ ಚಾಲಕರ ಸಮಸ್ಯೆಗಳನ್ನು ಸರ್ಕಾರ ಪರಿಹರಿಸುವಂತೆ ಅಗ್ರಹಿಸಿದ್ದವು.

ಈ ಪ್ರಯುಕ್ತ ಸಾರಿಗೆ ಆಯುಕ್ತರು ಬೆಂಗಳೂರು ಕಚೇರಿಯಲ್ಲಿ ಸಾರಿಗೆ ಒಕ್ಕೂಟದ ಸಂಘಟನೆಗಳ ಸಭೆಯನ್ನು ಕರೆದಿದ್ದು ಬೆಳ್ತಂಗಡಿ ತಾಲೂಕಿನ ರಿಕ್ಷಾ ಚಾಲಕ ಸಂಘದ ಪ್ರತಿನಿಧಿಗಳು ಈ ಸಭೆಯಲ್ಲಿ‌ ಭಾಗವಹಿಸಿದರು.

ಸಭೆಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರು ಹಾಗೂ ಸಾರಿಗೆ ಅಯುಕ್ತರು ಉಪಸ್ಥಿತರಿದ್ದರು. ರಿಕ್ಷಾ ಚಾಲಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಬಿಎಂಎಸ್ ವೆಹಿಕಲ್ ಯೂನಿಯನ್ ಪ್ರಮುಖರು .ಮುಖ್ಯವಾಗಿ ರಿಕ್ಷಾ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗೆ ಕಲ್ಯಾಣ ಮಂಡಳಿಯನ್ನು ರಚಿಸುವಂತೆ ಹಾಗೂ ಉಚಿತ ಆಸ್ಪತ್ರೆ ಚಿಕಿತ್ಸಾ ವೆಚ್ಚ, ಚಾಲಕರ ಮಕ್ಕಳಿಗೆ ಸ್ಕಾಲರ್ ಶಿಪ್ ,ಗೃಹ ನಿರ್ಮಾಣಕ್ಕೆ ಸಹಾಯಧನವನ್ನು ನೀಡುವಂತೆ, ವ್ರದ್ದಾಪ್ಯ ಪಿಂಚಣಿಯನ್ನು ನೀಡುವಂತೆ ಸಭೆಯಲ್ಲಿ ಅಗ್ರಹಿಸಲಾಯಿತು.

ಬೆಳ್ತಂಗಡಿ ತಾಲೂಕು ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಕೃಷ್ಣಬೆಳಾಲು, ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಗರ್ಡಾಡಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಉರುವಾಲು ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya
error: Content is protected !!