April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಜು.31 ರಂದು ಸೇವಾ ನಿವೃತ್ತಿ ಹೊಂದಿದರು.
1987ರಲ್ಲಿ ಸಹಕಾರಿ ಸಂಘದಲ್ಲಿ ದಿನವಹಿ ಸೇವೆ ಪ್ರಾರಂಭಿಸಿ 1991 ರಲ್ಲಿ ಗುಮಾಸ್ತರಾಗಿ2005 ರಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ 2015 ರಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಗಿ ಭಡ್ತಿಗೊಂಡು ಕಾರ್ಯನಿರ್ವಹಿಸಿ 36 ವರ್ಷಗಳ ಕಾಲ ಸೇವೆ ಸಲ್ಲಿಸಿದರು.


ಶಿಬಾಜೆ ಪೆರ್ಲ ‘ತುಡರ್’ ಮನೆಯವರಾದ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ಸಾರ್ವಜನಿಕ ಸಂಪರ್ಕ ಹೊಂದಿದ್ದು ಅರಸಿನಮಕ್ಕಿ ಜೆಸಿಐ ಸದಸ್ಯರಾಗಿ, ಪೆರ್ಲ ಹಿ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಪೆರ್ಲ ಶಾಲೆಯ ಸುವರ್ಣ ಮಹೋತ್ಸವದ ಸ್ಮರಣ ಸಂಚಿಕೆಯ ಸಂಪಾದಕರಾಗಿ, ಶ್ರೀ ರಾಜರಾಜೇಶ್ವರಿ ಭಜನಾಮಂಡಳಿಯ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ, ಶಿಬಾಜೆ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 2001ಮತ್ತು 2016ರ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.


ಅರಸಿನಮಕ್ಕಿಯ ಪದ್ಮಶಾಲಿ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ, ದಶಮಾನೋತ್ಸವ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಭಜನೆ, ತುಳು ನಾಟಕದಲ್ಲಿ ಅಭಿನಯ, ನಾಟಕ ರಚನೆ, ಯಕ್ಷಗಾನ ಇತ್ಯಾದಿ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

Related posts

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!