ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್ ಆ.೧ ರಂದು ಅಧಿಕಾರ ಸ್ವೀಕರಿಸಿದರು.
ಇವರು ಸಹಕಾರಿ ಸಂಘಕ್ಕೆ ೨೦೦೦ರಲ್ಲಿ ಗುಮಾಸ್ತರಾಗಿ ಸೇರ್ಪಡೆಗೊಂಡು, ೨೦೧೫ ರಲ್ಲಿ ಉಪ ಮುಖ್ಯಕಾರ್ಯ ನಿರ್ವಹಣಾಧಿಕಾರಿಯಾಗಿ ಭಡ್ತಿಗೊಂಡಿದ್ದರು.
ಜು.೩೧ ರಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರು ಸೇವಾ ನಿವೃತ್ತಿ ಹೊಂದಿದ್ದು ಆ.೧ ರಿಂದ ಟಿ. ರವಿಚಂದ್ರ ರಾವ್ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಭಡ್ತಿಗೊಂಡಿದ್ದಾರೆ.

Leave a Comment

error: Content is protected !!