24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

ರಾಜ್ಯದ ಶೈಕ್ಷಣಿಕ ಭೂಪಟದಲ್ಲಿ ತನ್ನ ಅನನ್ಯ ದಾಖಲೆಗಳ ಮೂಲಕ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈಗ ರಾಷ್ಟ್ರ ಮಟ್ಟದಲ್ಲಿ ಮತ್ತೊಮ್ಮೆ ಗುರುತಿಸಿಕೊಳ್ಳುವ ಸಾಧನೆ ಮಾಡಿದ್ದಾರೆ.

ಅತ್ಯುತ್ತಮ ಪಿಯು ಫಲಿತಾಂಶ ಮತ್ತು ನೀಟ್ ನಲ್ಲಿ 692 ಅಂಕಗಳನ್ನು ಪಡೆದಿದ್ದ ಆದಿತ್ ಜೈನ್ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾದ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಆಯ್ಕೆಯಾಗಿದ್ದಾರೆ. ವರ್ಷ ವೊಂದಕ್ಕೆ ಎಂ.ಬಿ.ಬಿ.ಎಸ್ ಗೆ ಕೇವಲ ನೂರು ಸೀಟುಗಳಿರುವ ಈ ವಿಶ್ವ ವಿದ್ಯಾಲಯದಲ್ಲಿ ಆದಿತ್ ಆಯ್ಕೆಯಾಗಿರುವುದು ಕರ್ನಾಟಕ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ.ರಾಷ್ಟ್ರ ಮಟ್ಟದಲ್ಲಿ ಗುರುತಿಸಿ ಕೊಳ್ಳುವಂತಹ ಇನ್ನೋರ್ವ ಸಾಧಕಿ ಸಂಜನಾ ಈರನೈವರ್. ವರ್ಷವೊಂದಕ್ಕೆ ನೂರ ಇಪ್ಪತ್ತೈದು ಸೀಟುಗಳಿರುವ ಅತ್ಯಂತ ಪ್ರತಿಷ್ಠಿತ ಎ ಐ ಐ ಎಂ ಎಸ್ (AIIMS) ಭೋಪಾಲ್ ನಲ್ಲಿ ವ್ಯಾಸಂಗಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸೆಲ್ ನಲ್ಲಿ ಶಿಕ್ಷಣ ಪಡೆದ ಹಲವು ವಿದ್ಯಾರ್ಥಿಗಳು ಈ ಬಾರಿಯೂ ರಾಷ್ಟ್ರ – ಅಂತಾರಾಷ್ಟ್ರೀಯ ಮಟ್ಟದ ವಿವಿಧ ಮೆಡಿಕಲ್ ಕಾಲೇಜು ಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾಗಿರುವುದು ಉಲ್ಲೇಖನೀಯ.ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

Suddi Udaya

ಅಕ್ರಮ ಪ್ರವೇಶ ಮಾಡಿ ಯುವಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ

Suddi Udaya
error: Content is protected !!