September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

ಚಾರ್ಮಾಡಿ: ಆಷಾಢ ಮಾಸದಲ್ಲಿ ದುರ್ಗಾದೇವಿಯ ಆರಾಧನೆಗೆ ಪ್ರಸಕ್ತ ಕಾಲ ಆದುದರಿಂದ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ. 01ರಂದು ಪುರೋಹಿತರಾದ ಮಧುಸೂದನ್ ರಾವ್ ಹಾಗೂ ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಉಪಾಧ್ಯಾಯ ಇವರ ಮುಂದಾಳತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ ಸಹಿತ ದುರ್ಗಾ ನಮಸ್ಕಾರ ಪೂಜೆ ವಿಜೃಂಭಣೆಯಿಂದ ನೆರವೇರಿತು.

ಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಪ್ರಸಾದನವನ್ನು ವಿತರಿಸಲಾಯಿತು.
ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಹೊಸಮಠ ಹಾಗೂ ಸಮಿತಿಯ ಸದಸ್ಯರಾದ ಗಣೇಶ್ ಕೋಟ್ಯಾನ್, ಶ್ರೀನಿವಾಸ್ ಕುಲಾಲ್ , ಕೇಶವ ಅರಣೆ ಪಾದೆ, ಜಗದೀಶ್ ಮುಗಳಿದಡ್ಕ, ಶ್ರೀಮತಿ ಶಾರದ, ಶ್ರೀಮತಿ ಶೈಲಜ ಮತ್ತು ಊರವರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya
error: Content is protected !!