28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

ಬೆಳ್ತಂಗಡಿ :ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ವಸಂತ ಗಿಳಿಯಾರ್ ಎಂಬ ಪೇಸ್ ಬುಕ್ ಖಾತೆಯಲ್ಲಿ ಯಾವುದೇ ಆಧಾರಗಳಿಲ್ಲದೆ ಅವಹೇಳನಕಾರಿಯಾಗಿ ಲೈವ್ ಪೋಸ್ಟ್ ಮಾಡಿದ್ದನ್ನು ವಸಂತ ಬಂಗೇರ ಅಭಿಮಾನಿಗಳು ಖಂಡಿಸಿದ್ದು,ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕೋಮು ಸೌಹಾರ್ದತೆಗೆ ಭಂಗವನ್ನು ತರಲು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳುವವರ ವಿರುದ್ದ ಕಾನೂಕು ಕ್ರಮ ಕೈಗೊಳ್ಳುವಂತೆ ವಸಂತ ಬಂಗೇರ ಅಭಿಮಾನಿಗಳು ಒತ್ತಾಯಿಸಿದರು.

ಅವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಂದಿಯನ್ನು ಹೊಡಿಯೋಣ ಎಂಬ ಹೇಳಿಕೆಯನ್ನು ಬಂಗೇರರವರು ನೀಡಿಲ್ಲ.ಒಡನಾಡಿ ಸ್ಟ್ಯಾಲಿಗೆ ಮತ್ತು ತಿಮರೋಡಿಯವರಿಗೂ ಕಾಲ್ ಮಾಡಿಲ್ಲ. ಶ್ರೀ ಕೇತ್ರದ ಬಗ್ಗೆ ವಸಂತ ಬಂಗೇರರವರಿಗೆ ಅಪಾರ ಭಕ್ತಿಯಿದ್ದು ಪುಣ್ಯಕ್ಷೇತ್ರದ ವಿರುದ್ದ ಅವರನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಸಂತ ಬಂಗೇರ ಅಭಿಮಾನಿಗಳು ತಿಳಿಸಿದರು.

ಪತ್ರಿಗೋಷ್ಟಿಯಲ್ಲಿ ಮನೋಹರ್ ಕುಮಾರ್ ಇಳಂತಿಲ,ಚಿದಾನಂದ ಪೂಜಾರಿ ಎಲ್ದಕ್ಕ, ಮಾಹಿಲ್ತೋಡಿ ಈಶ್ವರ ಭಟ್,ಧರಣೇಂದ್ರ ಕುಮಾರ್ ಹೊಸಂಗಡಿ, ಶೇಖರ್ ಕುಕ್ಕೇಡಿ, ಸಂತೋಷ್ ಕುಮಾರ್ ಲಾಯಿಲ, ಲೋಕೇಶ್ ಗೌಡ,ನಿತೇಶ್ ಕೋಟ್ಯಾನ್ ವೇಣೂರು, ಜಯವಿಕ್ರಮ್ ಕಲ್ಲಾಪು,ಬೊಮ್ಮಣ ಗೌಡ,ಆಯೂಬ್ ಡಿ.ಕೆ, ಪ್ರಭಾಕರ ಹೆಗ್ಡೆ ಹಟ್ಟಾಜೆ,ರಾಜಶೇಖರ ಶೆಟ್ಟಿ,ವಸಂತಿ ಸಿ ಪೂಜಾರಿ,ಪ್ರವೀಣ್ ಗೌಡ ಕೊಯ್ಯುರು ಉಪಸ್ಥಿತರಿದ್ದರು.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ