25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

ಬೆಳ್ತಂಗಡಿ :ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ವಸಂತ ಗಿಳಿಯಾರ್ ಎಂಬ ಪೇಸ್ ಬುಕ್ ಖಾತೆಯಲ್ಲಿ ಯಾವುದೇ ಆಧಾರಗಳಿಲ್ಲದೆ ಅವಹೇಳನಕಾರಿಯಾಗಿ ಲೈವ್ ಪೋಸ್ಟ್ ಮಾಡಿದ್ದನ್ನು ವಸಂತ ಬಂಗೇರ ಅಭಿಮಾನಿಗಳು ಖಂಡಿಸಿದ್ದು,ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕೋಮು ಸೌಹಾರ್ದತೆಗೆ ಭಂಗವನ್ನು ತರಲು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳುವವರ ವಿರುದ್ದ ಕಾನೂಕು ಕ್ರಮ ಕೈಗೊಳ್ಳುವಂತೆ ವಸಂತ ಬಂಗೇರ ಅಭಿಮಾನಿಗಳು ಒತ್ತಾಯಿಸಿದರು.

ಅವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಂದಿಯನ್ನು ಹೊಡಿಯೋಣ ಎಂಬ ಹೇಳಿಕೆಯನ್ನು ಬಂಗೇರರವರು ನೀಡಿಲ್ಲ.ಒಡನಾಡಿ ಸ್ಟ್ಯಾಲಿಗೆ ಮತ್ತು ತಿಮರೋಡಿಯವರಿಗೂ ಕಾಲ್ ಮಾಡಿಲ್ಲ. ಶ್ರೀ ಕೇತ್ರದ ಬಗ್ಗೆ ವಸಂತ ಬಂಗೇರರವರಿಗೆ ಅಪಾರ ಭಕ್ತಿಯಿದ್ದು ಪುಣ್ಯಕ್ಷೇತ್ರದ ವಿರುದ್ದ ಅವರನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಸಂತ ಬಂಗೇರ ಅಭಿಮಾನಿಗಳು ತಿಳಿಸಿದರು.

ಪತ್ರಿಗೋಷ್ಟಿಯಲ್ಲಿ ಮನೋಹರ್ ಕುಮಾರ್ ಇಳಂತಿಲ,ಚಿದಾನಂದ ಪೂಜಾರಿ ಎಲ್ದಕ್ಕ, ಮಾಹಿಲ್ತೋಡಿ ಈಶ್ವರ ಭಟ್,ಧರಣೇಂದ್ರ ಕುಮಾರ್ ಹೊಸಂಗಡಿ, ಶೇಖರ್ ಕುಕ್ಕೇಡಿ, ಸಂತೋಷ್ ಕುಮಾರ್ ಲಾಯಿಲ, ಲೋಕೇಶ್ ಗೌಡ,ನಿತೇಶ್ ಕೋಟ್ಯಾನ್ ವೇಣೂರು, ಜಯವಿಕ್ರಮ್ ಕಲ್ಲಾಪು,ಬೊಮ್ಮಣ ಗೌಡ,ಆಯೂಬ್ ಡಿ.ಕೆ, ಪ್ರಭಾಕರ ಹೆಗ್ಡೆ ಹಟ್ಟಾಜೆ,ರಾಜಶೇಖರ ಶೆಟ್ಟಿ,ವಸಂತಿ ಸಿ ಪೂಜಾರಿ,ಪ್ರವೀಣ್ ಗೌಡ ಕೊಯ್ಯುರು ಉಪಸ್ಥಿತರಿದ್ದರು.

Related posts

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಪಿಕಪ್ – ಟಿಪ್ಪರ್ ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣ: ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya
error: Content is protected !!