23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಆ.2 ರಂದು ಮನವಿ ನೀಡಲಾಯಿತು.

ಕಳೆದ 11 ವರ್ಷಗಳ ಹಿಂದೆ ಧರ್ಮಸ್ಥಳ ಪಾಂಗಾಳ ನಿವಾಸಿ ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಕೊಲೆ ನಡೆದಿದ್ದರೂ ಇದುವರೆಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳ ಪತ್ತೆ ಆಗಿರುವುದಿಲ್ಲ ಸೌಜನ್ಯಳ ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷದ ಹಿಂದೆಯೂ ಕೂಡ ನಮ್ಮ ಒಕ್ಕೂಟದ ವತಿಯಿಂದ ಆರೋಪಿಗಳ ಪತ್ತೆಗಾಗಿ ಮನವಿ ಸಲ್ಲಿಸಿರುತ್ತೇವೆ ಇನ್ನಾದರೂ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮಕೈಗೊಂಡು ಸೌಜನ್ಯಳ ಕುಟುಂಬ ವರ್ಗಕ್ಕೆ ಸೂಕ್ತ ನ್ಯಾಯ ಹಾಗೂ ಸಮಾಜಕ್ಕೆ ಭದ್ರತೆ ದೊರಕಿಸಿಕೊಡಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್, ಕಾರ್ಯದರ್ಶಿ ಆಶಾ ಸತೀಶ್, ಪ್ರಮುಖರಾದ ಲೋಕೇಶ್ವರಿ ವಿನಯಚಂದ್ರ, ಶಾಂತಾ ಬಂಗೇರ, ಮೆದೀನಿ ಡಿ. ಗೌಡ, ವಿನೋದಿನಿ ರಾಮಪ್ಪ, ಸೌಮ್ಯಶ್ರೀ ಶೆಟ್ಟಿ , ಲತಾ ಬಿ, ಶಾರದಾ, ಉಷಾ ಲಕ್ಷಣ ಗೌಡ, ಯಶೋಧ ಲಾಯಿಲ ಉಪಸ್ಥಿತರಿದ್ದರು.

Related posts

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya
error: Content is protected !!