23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

ಬೆಳ್ತಂಗಡಿ :ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ವಸಂತ ಗಿಳಿಯಾರ್ ಎಂಬ ಪೇಸ್ ಬುಕ್ ಖಾತೆಯಲ್ಲಿ ಯಾವುದೇ ಆಧಾರಗಳಿಲ್ಲದೆ ಅವಹೇಳನಕಾರಿಯಾಗಿ ಲೈವ್ ಪೋಸ್ಟ್ ಮಾಡಿದ್ದನ್ನು ವಸಂತ ಬಂಗೇರ ಅಭಿಮಾನಿಗಳು ಖಂಡಿಸಿದ್ದು,ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕೋಮು ಸೌಹಾರ್ದತೆಗೆ ಭಂಗವನ್ನು ತರಲು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳುವವರ ವಿರುದ್ದ ಕಾನೂಕು ಕ್ರಮ ಕೈಗೊಳ್ಳುವಂತೆ ವಸಂತ ಬಂಗೇರ ಅಭಿಮಾನಿಗಳು ಒತ್ತಾಯಿಸಿದರು.

ಅವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಂದಿಯನ್ನು ಹೊಡಿಯೋಣ ಎಂಬ ಹೇಳಿಕೆಯನ್ನು ಬಂಗೇರರವರು ನೀಡಿಲ್ಲ.ಒಡನಾಡಿ ಸ್ಟ್ಯಾಲಿಗೆ ಮತ್ತು ತಿಮರೋಡಿಯವರಿಗೂ ಕಾಲ್ ಮಾಡಿಲ್ಲ. ಶ್ರೀ ಕೇತ್ರದ ಬಗ್ಗೆ ವಸಂತ ಬಂಗೇರರವರಿಗೆ ಅಪಾರ ಭಕ್ತಿಯಿದ್ದು ಪುಣ್ಯಕ್ಷೇತ್ರದ ವಿರುದ್ದ ಅವರನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಸಂತ ಬಂಗೇರ ಅಭಿಮಾನಿಗಳು ತಿಳಿಸಿದರು.

ಪತ್ರಿಗೋಷ್ಟಿಯಲ್ಲಿ ಮನೋಹರ್ ಕುಮಾರ್ ಇಳಂತಿಲ,ಚಿದಾನಂದ ಪೂಜಾರಿ ಎಲ್ದಕ್ಕ, ಮಾಹಿಲ್ತೋಡಿ ಈಶ್ವರ ಭಟ್,ಧರಣೇಂದ್ರ ಕುಮಾರ್ ಹೊಸಂಗಡಿ, ಶೇಖರ್ ಕುಕ್ಕೇಡಿ, ಸಂತೋಷ್ ಕುಮಾರ್ ಲಾಯಿಲ, ಲೋಕೇಶ್ ಗೌಡ,ನಿತೇಶ್ ಕೋಟ್ಯಾನ್ ವೇಣೂರು, ಜಯವಿಕ್ರಮ್ ಕಲ್ಲಾಪು,ಬೊಮ್ಮಣ ಗೌಡ,ಆಯೂಬ್ ಡಿ.ಕೆ, ಪ್ರಭಾಕರ ಹೆಗ್ಡೆ ಹಟ್ಟಾಜೆ,ರಾಜಶೇಖರ ಶೆಟ್ಟಿ,ವಸಂತಿ ಸಿ ಪೂಜಾರಿ,ಪ್ರವೀಣ್ ಗೌಡ ಕೊಯ್ಯುರು ಉಪಸ್ಥಿತರಿದ್ದರು.

Related posts

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!