28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

ಬೆಳ್ತಂಗಡಿ :ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ವಸಂತ ಗಿಳಿಯಾರ್ ಎಂಬ ಪೇಸ್ ಬುಕ್ ಖಾತೆಯಲ್ಲಿ ಯಾವುದೇ ಆಧಾರಗಳಿಲ್ಲದೆ ಅವಹೇಳನಕಾರಿಯಾಗಿ ಲೈವ್ ಪೋಸ್ಟ್ ಮಾಡಿದ್ದನ್ನು ವಸಂತ ಬಂಗೇರ ಅಭಿಮಾನಿಗಳು ಖಂಡಿಸಿದ್ದು,ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕೋಮು ಸೌಹಾರ್ದತೆಗೆ ಭಂಗವನ್ನು ತರಲು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳುವವರ ವಿರುದ್ದ ಕಾನೂಕು ಕ್ರಮ ಕೈಗೊಳ್ಳುವಂತೆ ವಸಂತ ಬಂಗೇರ ಅಭಿಮಾನಿಗಳು ಒತ್ತಾಯಿಸಿದರು.

ಅವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಂದಿಯನ್ನು ಹೊಡಿಯೋಣ ಎಂಬ ಹೇಳಿಕೆಯನ್ನು ಬಂಗೇರರವರು ನೀಡಿಲ್ಲ.ಒಡನಾಡಿ ಸ್ಟ್ಯಾಲಿಗೆ ಮತ್ತು ತಿಮರೋಡಿಯವರಿಗೂ ಕಾಲ್ ಮಾಡಿಲ್ಲ. ಶ್ರೀ ಕೇತ್ರದ ಬಗ್ಗೆ ವಸಂತ ಬಂಗೇರರವರಿಗೆ ಅಪಾರ ಭಕ್ತಿಯಿದ್ದು ಪುಣ್ಯಕ್ಷೇತ್ರದ ವಿರುದ್ದ ಅವರನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಸಂತ ಬಂಗೇರ ಅಭಿಮಾನಿಗಳು ತಿಳಿಸಿದರು.

ಪತ್ರಿಗೋಷ್ಟಿಯಲ್ಲಿ ಮನೋಹರ್ ಕುಮಾರ್ ಇಳಂತಿಲ,ಚಿದಾನಂದ ಪೂಜಾರಿ ಎಲ್ದಕ್ಕ, ಮಾಹಿಲ್ತೋಡಿ ಈಶ್ವರ ಭಟ್,ಧರಣೇಂದ್ರ ಕುಮಾರ್ ಹೊಸಂಗಡಿ, ಶೇಖರ್ ಕುಕ್ಕೇಡಿ, ಸಂತೋಷ್ ಕುಮಾರ್ ಲಾಯಿಲ, ಲೋಕೇಶ್ ಗೌಡ,ನಿತೇಶ್ ಕೋಟ್ಯಾನ್ ವೇಣೂರು, ಜಯವಿಕ್ರಮ್ ಕಲ್ಲಾಪು,ಬೊಮ್ಮಣ ಗೌಡ,ಆಯೂಬ್ ಡಿ.ಕೆ, ಪ್ರಭಾಕರ ಹೆಗ್ಡೆ ಹಟ್ಟಾಜೆ,ರಾಜಶೇಖರ ಶೆಟ್ಟಿ,ವಸಂತಿ ಸಿ ಪೂಜಾರಿ,ಪ್ರವೀಣ್ ಗೌಡ ಕೊಯ್ಯುರು ಉಪಸ್ಥಿತರಿದ್ದರು.

Related posts

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya
error: Content is protected !!