29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಆ.2 ರಂದು ಮನವಿ ನೀಡಲಾಯಿತು.

ಕಳೆದ 11 ವರ್ಷಗಳ ಹಿಂದೆ ಧರ್ಮಸ್ಥಳ ಪಾಂಗಾಳ ನಿವಾಸಿ ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಕೊಲೆ ನಡೆದಿದ್ದರೂ ಇದುವರೆಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳ ಪತ್ತೆ ಆಗಿರುವುದಿಲ್ಲ ಸೌಜನ್ಯಳ ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷದ ಹಿಂದೆಯೂ ಕೂಡ ನಮ್ಮ ಒಕ್ಕೂಟದ ವತಿಯಿಂದ ಆರೋಪಿಗಳ ಪತ್ತೆಗಾಗಿ ಮನವಿ ಸಲ್ಲಿಸಿರುತ್ತೇವೆ ಇನ್ನಾದರೂ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮಕೈಗೊಂಡು ಸೌಜನ್ಯಳ ಕುಟುಂಬ ವರ್ಗಕ್ಕೆ ಸೂಕ್ತ ನ್ಯಾಯ ಹಾಗೂ ಸಮಾಜಕ್ಕೆ ಭದ್ರತೆ ದೊರಕಿಸಿಕೊಡಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್, ಕಾರ್ಯದರ್ಶಿ ಆಶಾ ಸತೀಶ್, ಪ್ರಮುಖರಾದ ಲೋಕೇಶ್ವರಿ ವಿನಯಚಂದ್ರ, ಶಾಂತಾ ಬಂಗೇರ, ಮೆದೀನಿ ಡಿ. ಗೌಡ, ವಿನೋದಿನಿ ರಾಮಪ್ಪ, ಸೌಮ್ಯಶ್ರೀ ಶೆಟ್ಟಿ , ಲತಾ ಬಿ, ಶಾರದಾ, ಉಷಾ ಲಕ್ಷಣ ಗೌಡ, ಯಶೋಧ ಲಾಯಿಲ ಉಪಸ್ಥಿತರಿದ್ದರು.

Related posts

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya
error: Content is protected !!