23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ದ.ಕ ಜಿಲ್ಲಾ ಗೊಲ್ಲ(ಯಾದವ) ಸಮಾಜ ಸೇವಾ ಸಂಘ(ರಿ) ಮಂಗಳೂರು ಇವರ ನೇತೃತ್ವದಲ್ಲಿ ಜು.30 ರಂದು ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣದ ಆದಿಶಕ್ತಿ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಬೆಳ್ತಂಗಡಿ ತಾಲೂಕಿನ ನೂತನ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವಲಯ ರಚನೆ ಮಾಡಲಾಯಿತು.

ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ದ.ಕ ಜಿಲ್ಲಾ ಗೊಲ್ಲ(ಯಾದವ) ಸಮಾಜ ಸೇವಾ ಸಂಘದ(ರಿ) ಅಧ್ಯಕ್ಷರಾದ ಟಿ. ಆರ್.ಕುಮಾರಸ್ವಾಮಿ ಉದ್ಘಾಟಿಸಿದರು. ದ.ಕ ಜಿಲ್ಲಾ ಗೊಲ್ಲ(ಯಾದವ) ಸಮಾಜ ಸೇವಾ ಸಂಘದ(ರಿ) ಗೌರವಾಧ್ಯಕ್ಷರಾದ ಯು.ಎನ್. ಪ್ರಮೋದ್ ಕುಮಾರ್ ರಾವ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಸಭೆಗೆ ಸಂಪೂರ್ಣ ಮಾಹಿತಿ ನೀಡಿದರು.


ವೇದಿಕೆಯಲ್ಲಿ ದ.ಕ ಜಿಲ್ಲಾ ಗೊಲ್ಲ(ಯಾದವ) ಸಮಾಜ ಸೇವಾ ಸಂಘದ(ರಿ) ಉಪಾಧ್ಯಕ್ಷರಾದ ವಿಜಯ್ ಕುಮಾರ್ ಮೂಡಬಿದ್ರೆ, ಕಾರ್ಯದರ್ಶಿ ಪ್ರಶಾಂತ್ ಸಿ. ಎಚ್, ಖಜಾಂಚಿ ಸುಧಾಕರ್ .ಯು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಗೊಲ್ಲ(ಯಾದವ) ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ರಾಜೇಶ್ ಅಳದಂಗಡಿ, ಅಧ್ಯಕ್ಷರಾಗಿ ರತ್ನಾಕರ ರಾವ್ ಕೇಳದಕಂಬಳ, ಉಪಾಧ್ಯಕ್ಷರಾಗಿ ಜಯಚಂದ್ರ ಮುಂಡಾಜೆ ಮತ್ತು ಚಿತ್ರ ಕುಕ್ಕಾಜೆ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕಾಶಿಪಟ್ಣ, ಜೊತೆ ಕಾರ್ಯದರ್ಶಿ ಹರೀಶ್ ಗೊಲ್ಲ ಬಜಿರೆ, ಖಜಾಂಚಿ ರಮಾನಂದ ಉಜಿರೆ, ಗೌರವ ಸಲಹೆಗಾರರಾಗಿ ಲೀಲಾವತಿ ಕಾಶಿಪಟ್ಣ, ವೆಂಕಟರಮಣ, ಸುಭಾಷ್ ಚಂದ್ರ, ವಿದ್ಯಾಲತಾ ಇವರನ್ನು ಆಯ್ಕೆ ಮಾಡಲಾಯಿತು.

ಕು.ನಿಸರ್ಗ, ಕು. ದೃತಿ ಪ್ರಾರ್ಥಿಸಿ, ಸುಭಾಸ್ಚಂದ್ರ ಸ್ವಾಗತಿಸಿ, ಅಭಿಷೇಕ್ ವಂದಿಸಿದರು, ವಿದ್ಯಾಲತಾ ನಿರೂಪಿಸಿದರು.

Related posts

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!