September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ದ.ಕ ಜಿಲ್ಲಾ ಗೊಲ್ಲ(ಯಾದವ) ಸಮಾಜ ಸೇವಾ ಸಂಘ(ರಿ) ಮಂಗಳೂರು ಇವರ ನೇತೃತ್ವದಲ್ಲಿ ಜು.30 ರಂದು ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣದ ಆದಿಶಕ್ತಿ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಬೆಳ್ತಂಗಡಿ ತಾಲೂಕಿನ ನೂತನ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವಲಯ ರಚನೆ ಮಾಡಲಾಯಿತು.

ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ದ.ಕ ಜಿಲ್ಲಾ ಗೊಲ್ಲ(ಯಾದವ) ಸಮಾಜ ಸೇವಾ ಸಂಘದ(ರಿ) ಅಧ್ಯಕ್ಷರಾದ ಟಿ. ಆರ್.ಕುಮಾರಸ್ವಾಮಿ ಉದ್ಘಾಟಿಸಿದರು. ದ.ಕ ಜಿಲ್ಲಾ ಗೊಲ್ಲ(ಯಾದವ) ಸಮಾಜ ಸೇವಾ ಸಂಘದ(ರಿ) ಗೌರವಾಧ್ಯಕ್ಷರಾದ ಯು.ಎನ್. ಪ್ರಮೋದ್ ಕುಮಾರ್ ರಾವ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಸಭೆಗೆ ಸಂಪೂರ್ಣ ಮಾಹಿತಿ ನೀಡಿದರು.


ವೇದಿಕೆಯಲ್ಲಿ ದ.ಕ ಜಿಲ್ಲಾ ಗೊಲ್ಲ(ಯಾದವ) ಸಮಾಜ ಸೇವಾ ಸಂಘದ(ರಿ) ಉಪಾಧ್ಯಕ್ಷರಾದ ವಿಜಯ್ ಕುಮಾರ್ ಮೂಡಬಿದ್ರೆ, ಕಾರ್ಯದರ್ಶಿ ಪ್ರಶಾಂತ್ ಸಿ. ಎಚ್, ಖಜಾಂಚಿ ಸುಧಾಕರ್ .ಯು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಗೊಲ್ಲ(ಯಾದವ) ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ರಾಜೇಶ್ ಅಳದಂಗಡಿ, ಅಧ್ಯಕ್ಷರಾಗಿ ರತ್ನಾಕರ ರಾವ್ ಕೇಳದಕಂಬಳ, ಉಪಾಧ್ಯಕ್ಷರಾಗಿ ಜಯಚಂದ್ರ ಮುಂಡಾಜೆ ಮತ್ತು ಚಿತ್ರ ಕುಕ್ಕಾಜೆ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕಾಶಿಪಟ್ಣ, ಜೊತೆ ಕಾರ್ಯದರ್ಶಿ ಹರೀಶ್ ಗೊಲ್ಲ ಬಜಿರೆ, ಖಜಾಂಚಿ ರಮಾನಂದ ಉಜಿರೆ, ಗೌರವ ಸಲಹೆಗಾರರಾಗಿ ಲೀಲಾವತಿ ಕಾಶಿಪಟ್ಣ, ವೆಂಕಟರಮಣ, ಸುಭಾಷ್ ಚಂದ್ರ, ವಿದ್ಯಾಲತಾ ಇವರನ್ನು ಆಯ್ಕೆ ಮಾಡಲಾಯಿತು.

ಕು.ನಿಸರ್ಗ, ಕು. ದೃತಿ ಪ್ರಾರ್ಥಿಸಿ, ಸುಭಾಸ್ಚಂದ್ರ ಸ್ವಾಗತಿಸಿ, ಅಭಿಷೇಕ್ ವಂದಿಸಿದರು, ವಿದ್ಯಾಲತಾ ನಿರೂಪಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya
error: Content is protected !!