25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

ಬೆಳ್ತಂಗಡಿ: ಕುರಿಯ ವಿಟ್ಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಆ.7 ರಿಂದ ಆ.13ರವರೆಗೆ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ ಕಾರ್ಯಕ್ರಮ ಲಾಯ್ಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಲಿದೆ.


ಪ್ರತಿದಿನ ಸಂಜೆ 6ರಿಂದ 9 ಗಂಟೆವರೆಗೆ ವಿದ್ವಾನ್ ಉಮಾಕಾಂತ ಭಟ್ಟ ಕೇರೆಕೈ ಅವರ ಪ್ರಧಾನಭೂಮಿಕೆಯ ಅರ್ಥ ಪ್ರಸ್ತುತಿಯೊಂದಿಗೆ ಯಕ್ಷಾವತರಣ 4 ನಡೆಯಲಿದ್ದು ರಾಮ, ವಸಿಷ್ಠ, ಕರ್ಣ, ಕೃಷ್ಣ, ವಿದುರ, ಅತಿಕಾಯ, ಕೃಷ್ಣ ಕೇಂದ್ರಿತ ಪ್ರಸಂಗಗಳು ನಡೆಯಲಿವೆ. ತೆಂಕು ಬಡಗಿನ ಪ್ರಸಿದ್ಧ ಕಲಾವಿದರು ಹಿಮ್ಮೇಳ ಮುಮ್ಮೇಳದಲ್ಲಿ ಭಾಗವಹಿಸಲಿದ್ದಾರೆ.

ಕೊರೊನಾ ಸಂದರ್ಭದಲ್ಲಿ ರೋಟರಿ ಕ್ಲಬ್, ಸ್ಥಾನಿಕ ಬ್ರಾಹ್ಮಣ ಸಭಾ, ಕುರಿಯ ಪ್ರತಿಷ್ಠಾನ ಜತೆಗೂಡಿ ಯಕ್ಷಾವತರಣ ತಾಳಮದ್ದಳೆ ಸಪ್ತಕ ಆರಂಭಿಸಿದ್ದು ಈಗ 4ನೇ ವರ್ಷಕ್ಕೆ ಕಾಲಿರಿಸಿದೆ. ವಿಟ್ಠಲ ಶಾಸ್ತ್ರಿ ಪ್ರತಿಷ್ಠಾನ ರಜತ ವರ್ಷ ಅಂಗವಾಗಿ ನಡೆಸುತ್ತಿರುವ ಸರಣಿ ತಾಳಮದ್ದಳೆಗಳ ಪೈಕಿ 104 ತಾಳಮದ್ದಳೆಗಳು ಈಗಾಗಲೇ ರಾಜ್ಯ ಹಾಗೂ ಹೊರರಾಜ್ಯದ ವಿವಿಧೆಡೆ ನಡೆದಿದ್ದು ಇದು ಸರಣಿಯ ಮುಂದುವರಿದ ಭಾಗವಾಗಿದೆ ಎಂದು ಕುರಿಯ ಪ್ರತಿಷ್ಠಾನದ ಸಂಚಾಲಕ ಅಶೋಕ ಭಟ್ ಎನ್.ಉಜಿರೆ, ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದ ಅಧ್ಯಕ್ಷ ಶಿವಾನಂದ ರಾವ್ ಕಕ್ಕಿನೇಜಿ, ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya
error: Content is protected !!