22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

ಬೆಳ್ತಂಗಡಿ: ಕುರಿಯ ವಿಟ್ಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಆ.7 ರಿಂದ ಆ.13ರವರೆಗೆ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ ಕಾರ್ಯಕ್ರಮ ಲಾಯ್ಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಲಿದೆ.


ಪ್ರತಿದಿನ ಸಂಜೆ 6ರಿಂದ 9 ಗಂಟೆವರೆಗೆ ವಿದ್ವಾನ್ ಉಮಾಕಾಂತ ಭಟ್ಟ ಕೇರೆಕೈ ಅವರ ಪ್ರಧಾನಭೂಮಿಕೆಯ ಅರ್ಥ ಪ್ರಸ್ತುತಿಯೊಂದಿಗೆ ಯಕ್ಷಾವತರಣ 4 ನಡೆಯಲಿದ್ದು ರಾಮ, ವಸಿಷ್ಠ, ಕರ್ಣ, ಕೃಷ್ಣ, ವಿದುರ, ಅತಿಕಾಯ, ಕೃಷ್ಣ ಕೇಂದ್ರಿತ ಪ್ರಸಂಗಗಳು ನಡೆಯಲಿವೆ. ತೆಂಕು ಬಡಗಿನ ಪ್ರಸಿದ್ಧ ಕಲಾವಿದರು ಹಿಮ್ಮೇಳ ಮುಮ್ಮೇಳದಲ್ಲಿ ಭಾಗವಹಿಸಲಿದ್ದಾರೆ.

ಕೊರೊನಾ ಸಂದರ್ಭದಲ್ಲಿ ರೋಟರಿ ಕ್ಲಬ್, ಸ್ಥಾನಿಕ ಬ್ರಾಹ್ಮಣ ಸಭಾ, ಕುರಿಯ ಪ್ರತಿಷ್ಠಾನ ಜತೆಗೂಡಿ ಯಕ್ಷಾವತರಣ ತಾಳಮದ್ದಳೆ ಸಪ್ತಕ ಆರಂಭಿಸಿದ್ದು ಈಗ 4ನೇ ವರ್ಷಕ್ಕೆ ಕಾಲಿರಿಸಿದೆ. ವಿಟ್ಠಲ ಶಾಸ್ತ್ರಿ ಪ್ರತಿಷ್ಠಾನ ರಜತ ವರ್ಷ ಅಂಗವಾಗಿ ನಡೆಸುತ್ತಿರುವ ಸರಣಿ ತಾಳಮದ್ದಳೆಗಳ ಪೈಕಿ 104 ತಾಳಮದ್ದಳೆಗಳು ಈಗಾಗಲೇ ರಾಜ್ಯ ಹಾಗೂ ಹೊರರಾಜ್ಯದ ವಿವಿಧೆಡೆ ನಡೆದಿದ್ದು ಇದು ಸರಣಿಯ ಮುಂದುವರಿದ ಭಾಗವಾಗಿದೆ ಎಂದು ಕುರಿಯ ಪ್ರತಿಷ್ಠಾನದ ಸಂಚಾಲಕ ಅಶೋಕ ಭಟ್ ಎನ್.ಉಜಿರೆ, ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದ ಅಧ್ಯಕ್ಷ ಶಿವಾನಂದ ರಾವ್ ಕಕ್ಕಿನೇಜಿ, ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಖೋ-ಖೋ ಪಂದ್ಯಾಟ: ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!