24 C
ಪುತ್ತೂರು, ಬೆಳ್ತಂಗಡಿ
March 31, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನೆರಿಯ: ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೊಟ್ಟೋ ದ ಕಾಣಿಕೆ ಡಬ್ಬಿಯನ್ನು ಮಂಗಳವಾರ ರಾತ್ರಿ ಕಳ್ಳರು ಹಾನಿಎಸಗಿ ಕಳ್ಳತನಗೈದಿದ್ದಾರೆ.

ಬುಧವಾರ ಬೆಳಗ್ಗೆಯಷ್ಟೇ ವಿಚಾರ ಬಹಿರಂಗವಾಗಿದ್ದು. ಚರ್ಚ್‌ನ ಮುಂಭಾಗದಲ್ಲಿದ್ದ ಕಾಣಿಕೆ ಡಬ್ಬಿಯ ಬೀಗ ಮುರಿಯಲಾಗಿದ್ದು ಅದರಲ್ಲಿದ್ದ ನಗದನ್ನು ಅಪಹರಿಸಲಾಗಿದೆ. ಕಾಣಿಕೆ ಡಬ್ಬಿಗೆ ಹಾನಿಯಾಗಿದೆ.
ಇಲ್ಲಿಂದ ಅಣತಿ ದೂರದ ಆಲಂಗಾಯಿ ತಿರುವು ರಸ್ತೆ‌ ಬಳಿ ಇರುವ ಸಂತ ಮರಿಯಮ್ಮರ ಗ್ರೋಟ್ಟೋ ಬಳಿಯ ಕಾಣಿಕೆ ಡಬ್ಬಿಯನ್ನೇ ಕಳ್ಳರು ಅಪಹರಿಸಿದ್ದಾರೆ.


ಚರ್ಚ್‌ನ ಧರ್ಮಗುರುಗಳು ಕಾರ್ಯನಿಮಿತ್ತ ರಾತ್ರಿ ಧರ್ಮಪ್ರಾಂತ್ಯಕ್ಕೆ ತೆರಳಿದ್ದರು‌. ಆ. 1 ರಂದು ಬೆಳಗ್ಗೆ ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಚರ್ಚ್ ನ ಆಡಳಿತ ಮಂಡಳಿ ಕಡೆಯಿಂದ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ. ಅವರು ಸ್ಥಳಕ್ಕೆ ಬಂದು ಮಹಜರು ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ. ಗ್ರೋಟ್ರೋ ಬಳಿಯ ವಿನು ಪುದಿಯಡತ್ತ್ ಅವರ ಮನೆಯ ಸಿಸಿ ಕೆಮರಾ ಪುಟೇಜ್ ಸಂಗ್ರಹಿಸಿಕೊಂಡಿರುವ ಪೊಲೀಸರು ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ