September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನೆರಿಯ: ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೊಟ್ಟೋ ದ ಕಾಣಿಕೆ ಡಬ್ಬಿಯನ್ನು ಮಂಗಳವಾರ ರಾತ್ರಿ ಕಳ್ಳರು ಹಾನಿಎಸಗಿ ಕಳ್ಳತನಗೈದಿದ್ದಾರೆ.

ಬುಧವಾರ ಬೆಳಗ್ಗೆಯಷ್ಟೇ ವಿಚಾರ ಬಹಿರಂಗವಾಗಿದ್ದು. ಚರ್ಚ್‌ನ ಮುಂಭಾಗದಲ್ಲಿದ್ದ ಕಾಣಿಕೆ ಡಬ್ಬಿಯ ಬೀಗ ಮುರಿಯಲಾಗಿದ್ದು ಅದರಲ್ಲಿದ್ದ ನಗದನ್ನು ಅಪಹರಿಸಲಾಗಿದೆ. ಕಾಣಿಕೆ ಡಬ್ಬಿಗೆ ಹಾನಿಯಾಗಿದೆ.
ಇಲ್ಲಿಂದ ಅಣತಿ ದೂರದ ಆಲಂಗಾಯಿ ತಿರುವು ರಸ್ತೆ‌ ಬಳಿ ಇರುವ ಸಂತ ಮರಿಯಮ್ಮರ ಗ್ರೋಟ್ಟೋ ಬಳಿಯ ಕಾಣಿಕೆ ಡಬ್ಬಿಯನ್ನೇ ಕಳ್ಳರು ಅಪಹರಿಸಿದ್ದಾರೆ.


ಚರ್ಚ್‌ನ ಧರ್ಮಗುರುಗಳು ಕಾರ್ಯನಿಮಿತ್ತ ರಾತ್ರಿ ಧರ್ಮಪ್ರಾಂತ್ಯಕ್ಕೆ ತೆರಳಿದ್ದರು‌. ಆ. 1 ರಂದು ಬೆಳಗ್ಗೆ ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಚರ್ಚ್ ನ ಆಡಳಿತ ಮಂಡಳಿ ಕಡೆಯಿಂದ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ. ಅವರು ಸ್ಥಳಕ್ಕೆ ಬಂದು ಮಹಜರು ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ. ಗ್ರೋಟ್ರೋ ಬಳಿಯ ವಿನು ಪುದಿಯಡತ್ತ್ ಅವರ ಮನೆಯ ಸಿಸಿ ಕೆಮರಾ ಪುಟೇಜ್ ಸಂಗ್ರಹಿಸಿಕೊಂಡಿರುವ ಪೊಲೀಸರು ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ.

Related posts

ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!