23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನೆರಿಯ: ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೊಟ್ಟೋ ದ ಕಾಣಿಕೆ ಡಬ್ಬಿಯನ್ನು ಮಂಗಳವಾರ ರಾತ್ರಿ ಕಳ್ಳರು ಹಾನಿಎಸಗಿ ಕಳ್ಳತನಗೈದಿದ್ದಾರೆ.

ಬುಧವಾರ ಬೆಳಗ್ಗೆಯಷ್ಟೇ ವಿಚಾರ ಬಹಿರಂಗವಾಗಿದ್ದು. ಚರ್ಚ್‌ನ ಮುಂಭಾಗದಲ್ಲಿದ್ದ ಕಾಣಿಕೆ ಡಬ್ಬಿಯ ಬೀಗ ಮುರಿಯಲಾಗಿದ್ದು ಅದರಲ್ಲಿದ್ದ ನಗದನ್ನು ಅಪಹರಿಸಲಾಗಿದೆ. ಕಾಣಿಕೆ ಡಬ್ಬಿಗೆ ಹಾನಿಯಾಗಿದೆ.
ಇಲ್ಲಿಂದ ಅಣತಿ ದೂರದ ಆಲಂಗಾಯಿ ತಿರುವು ರಸ್ತೆ‌ ಬಳಿ ಇರುವ ಸಂತ ಮರಿಯಮ್ಮರ ಗ್ರೋಟ್ಟೋ ಬಳಿಯ ಕಾಣಿಕೆ ಡಬ್ಬಿಯನ್ನೇ ಕಳ್ಳರು ಅಪಹರಿಸಿದ್ದಾರೆ.


ಚರ್ಚ್‌ನ ಧರ್ಮಗುರುಗಳು ಕಾರ್ಯನಿಮಿತ್ತ ರಾತ್ರಿ ಧರ್ಮಪ್ರಾಂತ್ಯಕ್ಕೆ ತೆರಳಿದ್ದರು‌. ಆ. 1 ರಂದು ಬೆಳಗ್ಗೆ ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಚರ್ಚ್ ನ ಆಡಳಿತ ಮಂಡಳಿ ಕಡೆಯಿಂದ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ. ಅವರು ಸ್ಥಳಕ್ಕೆ ಬಂದು ಮಹಜರು ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ. ಗ್ರೋಟ್ರೋ ಬಳಿಯ ವಿನು ಪುದಿಯಡತ್ತ್ ಅವರ ಮನೆಯ ಸಿಸಿ ಕೆಮರಾ ಪುಟೇಜ್ ಸಂಗ್ರಹಿಸಿಕೊಂಡಿರುವ ಪೊಲೀಸರು ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ.

Related posts

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya
error: Content is protected !!