25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನೆರಿಯ: ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೊಟ್ಟೋ ದ ಕಾಣಿಕೆ ಡಬ್ಬಿಯನ್ನು ಮಂಗಳವಾರ ರಾತ್ರಿ ಕಳ್ಳರು ಹಾನಿಎಸಗಿ ಕಳ್ಳತನಗೈದಿದ್ದಾರೆ.

ಬುಧವಾರ ಬೆಳಗ್ಗೆಯಷ್ಟೇ ವಿಚಾರ ಬಹಿರಂಗವಾಗಿದ್ದು. ಚರ್ಚ್‌ನ ಮುಂಭಾಗದಲ್ಲಿದ್ದ ಕಾಣಿಕೆ ಡಬ್ಬಿಯ ಬೀಗ ಮುರಿಯಲಾಗಿದ್ದು ಅದರಲ್ಲಿದ್ದ ನಗದನ್ನು ಅಪಹರಿಸಲಾಗಿದೆ. ಕಾಣಿಕೆ ಡಬ್ಬಿಗೆ ಹಾನಿಯಾಗಿದೆ.
ಇಲ್ಲಿಂದ ಅಣತಿ ದೂರದ ಆಲಂಗಾಯಿ ತಿರುವು ರಸ್ತೆ‌ ಬಳಿ ಇರುವ ಸಂತ ಮರಿಯಮ್ಮರ ಗ್ರೋಟ್ಟೋ ಬಳಿಯ ಕಾಣಿಕೆ ಡಬ್ಬಿಯನ್ನೇ ಕಳ್ಳರು ಅಪಹರಿಸಿದ್ದಾರೆ.


ಚರ್ಚ್‌ನ ಧರ್ಮಗುರುಗಳು ಕಾರ್ಯನಿಮಿತ್ತ ರಾತ್ರಿ ಧರ್ಮಪ್ರಾಂತ್ಯಕ್ಕೆ ತೆರಳಿದ್ದರು‌. ಆ. 1 ರಂದು ಬೆಳಗ್ಗೆ ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಚರ್ಚ್ ನ ಆಡಳಿತ ಮಂಡಳಿ ಕಡೆಯಿಂದ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ. ಅವರು ಸ್ಥಳಕ್ಕೆ ಬಂದು ಮಹಜರು ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ. ಗ್ರೋಟ್ರೋ ಬಳಿಯ ವಿನು ಪುದಿಯಡತ್ತ್ ಅವರ ಮನೆಯ ಸಿಸಿ ಕೆಮರಾ ಪುಟೇಜ್ ಸಂಗ್ರಹಿಸಿಕೊಂಡಿರುವ ಪೊಲೀಸರು ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya
error: Content is protected !!