25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನೆರಿಯ: ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೊಟ್ಟೋ ದ ಕಾಣಿಕೆ ಡಬ್ಬಿಯನ್ನು ಮಂಗಳವಾರ ರಾತ್ರಿ ಕಳ್ಳರು ಹಾನಿಎಸಗಿ ಕಳ್ಳತನಗೈದಿದ್ದಾರೆ.

ಬುಧವಾರ ಬೆಳಗ್ಗೆಯಷ್ಟೇ ವಿಚಾರ ಬಹಿರಂಗವಾಗಿದ್ದು. ಚರ್ಚ್‌ನ ಮುಂಭಾಗದಲ್ಲಿದ್ದ ಕಾಣಿಕೆ ಡಬ್ಬಿಯ ಬೀಗ ಮುರಿಯಲಾಗಿದ್ದು ಅದರಲ್ಲಿದ್ದ ನಗದನ್ನು ಅಪಹರಿಸಲಾಗಿದೆ. ಕಾಣಿಕೆ ಡಬ್ಬಿಗೆ ಹಾನಿಯಾಗಿದೆ.
ಇಲ್ಲಿಂದ ಅಣತಿ ದೂರದ ಆಲಂಗಾಯಿ ತಿರುವು ರಸ್ತೆ‌ ಬಳಿ ಇರುವ ಸಂತ ಮರಿಯಮ್ಮರ ಗ್ರೋಟ್ಟೋ ಬಳಿಯ ಕಾಣಿಕೆ ಡಬ್ಬಿಯನ್ನೇ ಕಳ್ಳರು ಅಪಹರಿಸಿದ್ದಾರೆ.


ಚರ್ಚ್‌ನ ಧರ್ಮಗುರುಗಳು ಕಾರ್ಯನಿಮಿತ್ತ ರಾತ್ರಿ ಧರ್ಮಪ್ರಾಂತ್ಯಕ್ಕೆ ತೆರಳಿದ್ದರು‌. ಆ. 1 ರಂದು ಬೆಳಗ್ಗೆ ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಚರ್ಚ್ ನ ಆಡಳಿತ ಮಂಡಳಿ ಕಡೆಯಿಂದ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ. ಅವರು ಸ್ಥಳಕ್ಕೆ ಬಂದು ಮಹಜರು ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ. ಗ್ರೋಟ್ರೋ ಬಳಿಯ ವಿನು ಪುದಿಯಡತ್ತ್ ಅವರ ಮನೆಯ ಸಿಸಿ ಕೆಮರಾ ಪುಟೇಜ್ ಸಂಗ್ರಹಿಸಿಕೊಂಡಿರುವ ಪೊಲೀಸರು ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ.

Related posts

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya
error: Content is protected !!