July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

ಬೆಳ್ತಂಗಡಿ: ರಾಜ್ಯ ಸರಕಾರ ಒಟ್ಟು 211 ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಆಗಿ ನಾಗೇಶ್ ಕದ್ರಿ ಅವರನ್ನು ನೇಮಕ ಮಾಡಿದೆ.

ನಾಗೇಶ್ ಕದ್ರಿ ಅವರು ಈ ಹಿಂದೆ ಕೊಡಗು ಜಿಲ್ಲೆಯ ಡಿ.ಸಿ. ಆರ್.ಬಿ. ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇದೀಗ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ಕರ್ತವ್ಯದಲ್ಲಿದ್ದ ಜಾಗಕ್ಕೆ ವರ್ಗಾವಣೆಗೊಂಡಿದ್ದಾರೆ.

ಈ ಹಿಂದೆ 2016 ರಿಂದ 2018ರ ವರೆಗೆ ಬೆಳ್ತಂಗಡಿಯಲ್ಲಿ, 2018 ರಿಂದ 2020ರ ವರೆಗೆ ಉಪ್ಪಿನಂಗಡಿಯ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸಿ, ನಂತರ ಮಂಗಳೂರಿನ ಐ.ಜಿ. ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಿದ ಇವರು ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರಿಗೆ ಯಾವುದೇ ಠಾಣೆ ನೀಡದೆ ಬಾಕಿ ಉಳಿಸಿದೆ.

Related posts

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya
error: Content is protected !!