ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಚಾರ್ಮಾಡಿ: ಆಷಾಢ ಮಾಸದಲ್ಲಿ ದುರ್ಗಾದೇವಿಯ ಆರಾಧನೆಗೆ ಪ್ರಸಕ್ತ ಕಾಲ ಆದುದರಿಂದ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ. 01ರಂದು ಪುರೋಹಿತರಾದ ಮಧುಸೂದನ್ ರಾವ್ ಹಾಗೂ ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಉಪಾಧ್ಯಾಯ ಇವರ ಮುಂದಾಳತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ ಸಹಿತ ದುರ್ಗಾ ನಮಸ್ಕಾರ ಪೂಜೆ ವಿಜೃಂಭಣೆಯಿಂದ ನೆರವೇರಿತು.

ಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಪ್ರಸಾದನವನ್ನು ವಿತರಿಸಲಾಯಿತು.
ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಹೊಸಮಠ ಹಾಗೂ ಸಮಿತಿಯ ಸದಸ್ಯರಾದ ಗಣೇಶ್ ಕೋಟ್ಯಾನ್, ಶ್ರೀನಿವಾಸ್ ಕುಲಾಲ್ , ಕೇಶವ ಅರಣೆ ಪಾದೆ, ಜಗದೀಶ್ ಮುಗಳಿದಡ್ಕ, ಶ್ರೀಮತಿ ಶಾರದ, ಶ್ರೀಮತಿ ಶೈಲಜ ಮತ್ತು ಊರವರು ಉಪಸ್ಥಿತರಿದ್ದರು.

Leave a Comment

error: Content is protected !!