28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

ಬೆಳ್ತಂಗಡಿ :ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ವಸಂತ ಗಿಳಿಯಾರ್ ಎಂಬ ಪೇಸ್ ಬುಕ್ ಖಾತೆಯಲ್ಲಿ ಯಾವುದೇ ಆಧಾರಗಳಿಲ್ಲದೆ ಅವಹೇಳನಕಾರಿಯಾಗಿ ಲೈವ್ ಪೋಸ್ಟ್ ಮಾಡಿದ್ದನ್ನು ವಸಂತ ಬಂಗೇರ ಅಭಿಮಾನಿಗಳು ಖಂಡಿಸಿದ್ದು,ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕೋಮು ಸೌಹಾರ್ದತೆಗೆ ಭಂಗವನ್ನು ತರಲು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳುವವರ ವಿರುದ್ದ ಕಾನೂಕು ಕ್ರಮ ಕೈಗೊಳ್ಳುವಂತೆ ವಸಂತ ಬಂಗೇರ ಅಭಿಮಾನಿಗಳು ಒತ್ತಾಯಿಸಿದರು.

ಅವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಂದಿಯನ್ನು ಹೊಡಿಯೋಣ ಎಂಬ ಹೇಳಿಕೆಯನ್ನು ಬಂಗೇರರವರು ನೀಡಿಲ್ಲ.ಒಡನಾಡಿ ಸ್ಟ್ಯಾಲಿಗೆ ಮತ್ತು ತಿಮರೋಡಿಯವರಿಗೂ ಕಾಲ್ ಮಾಡಿಲ್ಲ. ಶ್ರೀ ಕೇತ್ರದ ಬಗ್ಗೆ ವಸಂತ ಬಂಗೇರರವರಿಗೆ ಅಪಾರ ಭಕ್ತಿಯಿದ್ದು ಪುಣ್ಯಕ್ಷೇತ್ರದ ವಿರುದ್ದ ಅವರನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಸಂತ ಬಂಗೇರ ಅಭಿಮಾನಿಗಳು ತಿಳಿಸಿದರು.

ಪತ್ರಿಗೋಷ್ಟಿಯಲ್ಲಿ ಮನೋಹರ್ ಕುಮಾರ್ ಇಳಂತಿಲ,ಚಿದಾನಂದ ಪೂಜಾರಿ ಎಲ್ದಕ್ಕ, ಮಾಹಿಲ್ತೋಡಿ ಈಶ್ವರ ಭಟ್,ಧರಣೇಂದ್ರ ಕುಮಾರ್ ಹೊಸಂಗಡಿ, ಶೇಖರ್ ಕುಕ್ಕೇಡಿ, ಸಂತೋಷ್ ಕುಮಾರ್ ಲಾಯಿಲ, ಲೋಕೇಶ್ ಗೌಡ,ನಿತೇಶ್ ಕೋಟ್ಯಾನ್ ವೇಣೂರು, ಜಯವಿಕ್ರಮ್ ಕಲ್ಲಾಪು,ಬೊಮ್ಮಣ ಗೌಡ,ಆಯೂಬ್ ಡಿ.ಕೆ, ಪ್ರಭಾಕರ ಹೆಗ್ಡೆ ಹಟ್ಟಾಜೆ,ರಾಜಶೇಖರ ಶೆಟ್ಟಿ,ವಸಂತಿ ಸಿ ಪೂಜಾರಿ,ಪ್ರವೀಣ್ ಗೌಡ ಕೊಯ್ಯುರು ಉಪಸ್ಥಿತರಿದ್ದರು.

Related posts

ಬೋಳಿಯಾರ್ ಸಮೀಪ ಕಾರಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!