23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

ಬೆಳ್ತಂಗಡಿ :ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ವಸಂತ ಗಿಳಿಯಾರ್ ಎಂಬ ಪೇಸ್ ಬುಕ್ ಖಾತೆಯಲ್ಲಿ ಯಾವುದೇ ಆಧಾರಗಳಿಲ್ಲದೆ ಅವಹೇಳನಕಾರಿಯಾಗಿ ಲೈವ್ ಪೋಸ್ಟ್ ಮಾಡಿದ್ದನ್ನು ವಸಂತ ಬಂಗೇರ ಅಭಿಮಾನಿಗಳು ಖಂಡಿಸಿದ್ದು,ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕೋಮು ಸೌಹಾರ್ದತೆಗೆ ಭಂಗವನ್ನು ತರಲು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳುವವರ ವಿರುದ್ದ ಕಾನೂಕು ಕ್ರಮ ಕೈಗೊಳ್ಳುವಂತೆ ವಸಂತ ಬಂಗೇರ ಅಭಿಮಾನಿಗಳು ಒತ್ತಾಯಿಸಿದರು.

ಅವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಂದಿಯನ್ನು ಹೊಡಿಯೋಣ ಎಂಬ ಹೇಳಿಕೆಯನ್ನು ಬಂಗೇರರವರು ನೀಡಿಲ್ಲ.ಒಡನಾಡಿ ಸ್ಟ್ಯಾಲಿಗೆ ಮತ್ತು ತಿಮರೋಡಿಯವರಿಗೂ ಕಾಲ್ ಮಾಡಿಲ್ಲ. ಶ್ರೀ ಕೇತ್ರದ ಬಗ್ಗೆ ವಸಂತ ಬಂಗೇರರವರಿಗೆ ಅಪಾರ ಭಕ್ತಿಯಿದ್ದು ಪುಣ್ಯಕ್ಷೇತ್ರದ ವಿರುದ್ದ ಅವರನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಸಂತ ಬಂಗೇರ ಅಭಿಮಾನಿಗಳು ತಿಳಿಸಿದರು.

ಪತ್ರಿಗೋಷ್ಟಿಯಲ್ಲಿ ಮನೋಹರ್ ಕುಮಾರ್ ಇಳಂತಿಲ,ಚಿದಾನಂದ ಪೂಜಾರಿ ಎಲ್ದಕ್ಕ, ಮಾಹಿಲ್ತೋಡಿ ಈಶ್ವರ ಭಟ್,ಧರಣೇಂದ್ರ ಕುಮಾರ್ ಹೊಸಂಗಡಿ, ಶೇಖರ್ ಕುಕ್ಕೇಡಿ, ಸಂತೋಷ್ ಕುಮಾರ್ ಲಾಯಿಲ, ಲೋಕೇಶ್ ಗೌಡ,ನಿತೇಶ್ ಕೋಟ್ಯಾನ್ ವೇಣೂರು, ಜಯವಿಕ್ರಮ್ ಕಲ್ಲಾಪು,ಬೊಮ್ಮಣ ಗೌಡ,ಆಯೂಬ್ ಡಿ.ಕೆ, ಪ್ರಭಾಕರ ಹೆಗ್ಡೆ ಹಟ್ಟಾಜೆ,ರಾಜಶೇಖರ ಶೆಟ್ಟಿ,ವಸಂತಿ ಸಿ ಪೂಜಾರಿ,ಪ್ರವೀಣ್ ಗೌಡ ಕೊಯ್ಯುರು ಉಪಸ್ಥಿತರಿದ್ದರು.

Related posts

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!