July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ


ಕೊಯ್ಯೂರು : ಸರಕಾರಿ ಪ್ರೌಢಶಾಲೆ ಕೊಯ್ಯೂರು ಇಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಶಾಲಾ ಪಾರ್ಲಿಮೆಂಟ್  ಉದ್ಘಾಟನೆ  ಇತ್ತೀಚೆಗೆ ನಡೆಯಿತು. 

ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇದರ ಅಧ್ಯಕ್ಷ ಸುಮಂತ್ ಜೈನ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಂತ್ರಿಮಂಡಲದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.ಬಳಿಕ  ನಡೆದ ಅಣಕು ಪಾರ್ಲಿಮೆಂಟ್ ನಲ್ಲಿ ರಾಷ್ಟ್ರಪತಿ ಭಾಷಣ ಮಾಡಿದರು. ನಂತರ ನಡೆದ ಕಲಾಪವನ್ನು ವೀಕ್ಷಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಕುರಿತು ಭಾಷಣ ಮಾಡುತ್ತಾ  ರಾಜಕೀಯ ಒಂದು ಉದ್ಯೋಗವಾಗಬಾರದು  ಅದೊಂದು ಜವಾಬ್ಧಾರಿಯಾಗಿದೆ. ನಾಯಕ ಯಾವತ್ತೂ ಸ್ಥಾನದಿಂದ ಆಗಬಾರದು ಬದಲಾಗಿ ಆತನ ನಡವಳಿಕೆಯಿಂದ ಆಗಬೇಕು.ಶಿಕ್ಷಣದ ಬೇರು ಕಹಿ ಆದರೂ ಅದರ ಫಲ  ಎಂದಿಗೂ ಸಿಹಿಯಾಗಿರುತ್ತದೆ. ಸಂವಿಧಾನದಲ್ಲಿ ಎಲ್ಲರಿಗೂ ಅವಕಾಸವಿದೆ ಅದನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉನ್ನತ ಸ್ಥಾನ ಪಡೆಯಬೇಕು ಎಂದರು.

ಶಾಲೆಯಲ್ಲಿ ನಡೆದ ವಿದ್ಯಾರ್ಥಿನಾಯಕ ಚುನಾವಣೆಯಲ್ಲಿ ಶಾಲಾನಾಯಕನಾಗಿ ಪೂರ್ಣೇಶ್  ಹತ್ತನೇ ತರಗತಿ  ಆಯ್ಕೆಯಾಗಿರುತ್ತಾರೆ. ಸಭಾಪತಿಯಾಗಿ  ಶಹದಿಯಾ ಹತ್ತನೇ ತರಗತಿ  ಕಲಾಪ ನಡೆಸಿಕೊಟ್ಟರು. ಶಾಲಾ ಮುಖ್ಯೋಪಾಧ್ಯಾಯರಾದ ರಾಧಾಕೃಷ್ಣ ತಚ್ಚಮೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಎಕ್ಸೆಲ್ ಪ.ಪೂ. ಕಾಲೇಜು ಇಲ್ಲಿಯ ಆಡಳಿತಾಧಿಕಾರಿ ಪುರುಷೋತ್ತಮ, ಲೆಕ್ಕಾಧಿಕಾರಿ ಋತೇಶ್, ಪ್ರಾಚೀನ ವಸ್ತು ಸಂಗ್ಹಕಾರ  ಹೈದರಾಲಿ ಹಳ್ಳಿಮನೆ ಉಪಸ್ಥಿತರಿದ್ದರು .

ಶಿಕ್ಷಕರಾದ ಶ್ರೀಮತಿ ಬೇಬಿ ಶ್ರೀಮತಿ ದೀಪ್ತಿ ಹೆಗ್ಡೆ,ಶ್ರೀಮತಿ ಗೀತಾ ಉಡುಪಿ. ಸುಧಾಕರ ಶೆಟ್ಟಿ, ಪ್ರವೀಣ್ ಕುಮಾರ್, ಮೋಹನದಾಸ  ಸಹಕರಿಸಿದರು. ರಾಮಚಂದ್ರ ದೊಡಮನಿ ವಂದಿಸಿದರು.

Related posts

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya
error: Content is protected !!