July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

ಕಕ್ಕಿಂಜೆ: ಚಾರ್ಮಾಡಿ ಗ್ರಾಮ ಪಂಚಾಯತ್ ಮಟ್ಟದ ಸುಸ್ಥಿರ ಅಭಿವೃದ್ಧಿ ಗುರಿಗಳು ಹಾಗೂ ಮಕ್ಕಳ ಹಕ್ಕುಗಳ ಒಡಂಬಡಿಕೆಯ ತರಬೇತಿ ಕಾರ್ಯಕ್ರಮವು ಆ. 02ರಂದು ಚಾರ್ಮಾಡಿ ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಆಡಳಿತದಲ್ಲಿ ಮಕ್ಕಳು ಯೋಜನೆಯ ಅಂಗವಾಗಿ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ಕಲ್ಲಾಜೆ ಮಾತನಾಡಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು, ಮಕ್ಕಳ ಹಕ್ಕುಗಳ ಒಡಂಬಡಿಕೆ, ಮಕ್ಕಳ ಹಕ್ಕುಗಳ ಗ್ರಾಮ ಸಭೆ, ಮಕ್ಕಳ ಹಕ್ಕುಗಳ ಸಂಘ, ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ, ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆ ಬಗ್ಗೆ ವಿವರಿಸಿ ನಮ್ಮ ಮಕ್ಕಳಿಗೆ ಸುಸ್ಥಿರ ಸಮಾಜ ನಿರ್ಮಾಣ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಆಡಳಿತದಲ್ಲಿ ಮಕ್ಕಳು ಯೋಜನೆಯ ಅಂಗವಾಗಿ ಹೊರತಂದಿರುವ ‘ಮಕ್ಕಳ ಹಕ್ಕುಗಳ ಗ್ರಾಮಸಭೆ’ ಮತ್ತು ‘ಗ್ರಾಮ ಪಂಚಾಯತ್ ಕಾಯಿದೆ ಮತ್ತು ಮಕ್ಕಳು’ ಭಿತ್ತಿಪತ್ರಗಳನ್ನು ಪಂಚಾಯತ್ ಅಧ್ಯಕ್ಷ ಕೆ.ವಿ.ಪ್ರಸಾದ್ , ಉಪಾಧ್ಯಕ್ಷರಾದ ಶ್ರೀಮತಿ ಸುರೇಖಾ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ.ಜಿ ಹಾಗೂ ಸದಸ್ಯರು ಬಿಡುಗಡೆಗೊಳಿಸಿದರು.

Related posts

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ

Suddi Udaya
error: Content is protected !!