July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಧರ್ಮಸ್ಥಳ: ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟವು ಆ.2 ರಂದು ನಡೆಯಿತು.

ಪಂದ್ಯಾಟವನ್ನು ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಎಸ್ ವಿರೂಪಾಕ್ಷಪ್ಪ ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು, ಶ್ರೀ ಧ ಮಂ ಕ್ರೀಡಾ ಸಂಘದ ಕಾರ್ಯದರ್ಶಿಗಳಾದ ರಮೇಶ್ ಎಚ್,
ಶ್ರೀಮತಿ ಸುಜಯ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಕೃಷ್ಣಾನಂದ ರಾವ್ ಮತ್ತು ಶ್ರೀಮತಿ ರಮಾ ರಾಜೇಶ್ ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ತಾಲೂಕಿನ ಒಟ್ಟು 10 ತಂಡಗಳು ಭಾಗವಹಿಸಿದ್ದು, ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಪ್ರಥಮ ಸ್ಥಾನ, ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ದ್ವಿತೀಯ, ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಪ್ರಥಮ ಸ್ಥಾನ, ಶ್ರೀ ಧ ಮಂ ಅನುದಾನಿತ ಪ್ರೌಢಶಾಲೆ ಪೆರಿಂಜೆ ದ್ವಿತೀಯ ಸ್ಥಾನ ಪಡೆಯಿತು. ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಪ್ರಥಮ ಸ್ಥಾನ, ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ದ್ವಿತೀಯ. ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಪ್ರಥಮ, ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ದ್ವಿತೀಯ ಸ್ಥಾನ ಪಡೆಯಿತು. ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.
ವಿಜೇತರಿಗೆ ಶಾಲಾ ಸಂಚಾಲಕರಾದ ಅನಂತ ಪದ್ಮನಾಭ ಭಟ್ ಪ್ರಶಸ್ತಿ ವಿತರಿಸಿ ಅಭಿನಂದಿಸಿದರು.

Related posts

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya
error: Content is protected !!