25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ


ಕೊಯ್ಯೂರು : ಸರಕಾರಿ ಪ್ರೌಢಶಾಲೆ ಕೊಯ್ಯೂರು ಇಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಶಾಲಾ ಪಾರ್ಲಿಮೆಂಟ್  ಉದ್ಘಾಟನೆ  ಇತ್ತೀಚೆಗೆ ನಡೆಯಿತು. 

ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇದರ ಅಧ್ಯಕ್ಷ ಸುಮಂತ್ ಜೈನ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಂತ್ರಿಮಂಡಲದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.ಬಳಿಕ  ನಡೆದ ಅಣಕು ಪಾರ್ಲಿಮೆಂಟ್ ನಲ್ಲಿ ರಾಷ್ಟ್ರಪತಿ ಭಾಷಣ ಮಾಡಿದರು. ನಂತರ ನಡೆದ ಕಲಾಪವನ್ನು ವೀಕ್ಷಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಕುರಿತು ಭಾಷಣ ಮಾಡುತ್ತಾ  ರಾಜಕೀಯ ಒಂದು ಉದ್ಯೋಗವಾಗಬಾರದು  ಅದೊಂದು ಜವಾಬ್ಧಾರಿಯಾಗಿದೆ. ನಾಯಕ ಯಾವತ್ತೂ ಸ್ಥಾನದಿಂದ ಆಗಬಾರದು ಬದಲಾಗಿ ಆತನ ನಡವಳಿಕೆಯಿಂದ ಆಗಬೇಕು.ಶಿಕ್ಷಣದ ಬೇರು ಕಹಿ ಆದರೂ ಅದರ ಫಲ  ಎಂದಿಗೂ ಸಿಹಿಯಾಗಿರುತ್ತದೆ. ಸಂವಿಧಾನದಲ್ಲಿ ಎಲ್ಲರಿಗೂ ಅವಕಾಸವಿದೆ ಅದನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉನ್ನತ ಸ್ಥಾನ ಪಡೆಯಬೇಕು ಎಂದರು.

ಶಾಲೆಯಲ್ಲಿ ನಡೆದ ವಿದ್ಯಾರ್ಥಿನಾಯಕ ಚುನಾವಣೆಯಲ್ಲಿ ಶಾಲಾನಾಯಕನಾಗಿ ಪೂರ್ಣೇಶ್  ಹತ್ತನೇ ತರಗತಿ  ಆಯ್ಕೆಯಾಗಿರುತ್ತಾರೆ. ಸಭಾಪತಿಯಾಗಿ  ಶಹದಿಯಾ ಹತ್ತನೇ ತರಗತಿ  ಕಲಾಪ ನಡೆಸಿಕೊಟ್ಟರು. ಶಾಲಾ ಮುಖ್ಯೋಪಾಧ್ಯಾಯರಾದ ರಾಧಾಕೃಷ್ಣ ತಚ್ಚಮೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಎಕ್ಸೆಲ್ ಪ.ಪೂ. ಕಾಲೇಜು ಇಲ್ಲಿಯ ಆಡಳಿತಾಧಿಕಾರಿ ಪುರುಷೋತ್ತಮ, ಲೆಕ್ಕಾಧಿಕಾರಿ ಋತೇಶ್, ಪ್ರಾಚೀನ ವಸ್ತು ಸಂಗ್ಹಕಾರ  ಹೈದರಾಲಿ ಹಳ್ಳಿಮನೆ ಉಪಸ್ಥಿತರಿದ್ದರು .

ಶಿಕ್ಷಕರಾದ ಶ್ರೀಮತಿ ಬೇಬಿ ಶ್ರೀಮತಿ ದೀಪ್ತಿ ಹೆಗ್ಡೆ,ಶ್ರೀಮತಿ ಗೀತಾ ಉಡುಪಿ. ಸುಧಾಕರ ಶೆಟ್ಟಿ, ಪ್ರವೀಣ್ ಕುಮಾರ್, ಮೋಹನದಾಸ  ಸಹಕರಿಸಿದರು. ರಾಮಚಂದ್ರ ದೊಡಮನಿ ವಂದಿಸಿದರು.

Related posts

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!