23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ


ಕೊಯ್ಯೂರು : ಸರಕಾರಿ ಪ್ರೌಢಶಾಲೆ ಕೊಯ್ಯೂರು ಇಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಶಾಲಾ ಪಾರ್ಲಿಮೆಂಟ್  ಉದ್ಘಾಟನೆ  ಇತ್ತೀಚೆಗೆ ನಡೆಯಿತು. 

ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇದರ ಅಧ್ಯಕ್ಷ ಸುಮಂತ್ ಜೈನ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಂತ್ರಿಮಂಡಲದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.ಬಳಿಕ  ನಡೆದ ಅಣಕು ಪಾರ್ಲಿಮೆಂಟ್ ನಲ್ಲಿ ರಾಷ್ಟ್ರಪತಿ ಭಾಷಣ ಮಾಡಿದರು. ನಂತರ ನಡೆದ ಕಲಾಪವನ್ನು ವೀಕ್ಷಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಕುರಿತು ಭಾಷಣ ಮಾಡುತ್ತಾ  ರಾಜಕೀಯ ಒಂದು ಉದ್ಯೋಗವಾಗಬಾರದು  ಅದೊಂದು ಜವಾಬ್ಧಾರಿಯಾಗಿದೆ. ನಾಯಕ ಯಾವತ್ತೂ ಸ್ಥಾನದಿಂದ ಆಗಬಾರದು ಬದಲಾಗಿ ಆತನ ನಡವಳಿಕೆಯಿಂದ ಆಗಬೇಕು.ಶಿಕ್ಷಣದ ಬೇರು ಕಹಿ ಆದರೂ ಅದರ ಫಲ  ಎಂದಿಗೂ ಸಿಹಿಯಾಗಿರುತ್ತದೆ. ಸಂವಿಧಾನದಲ್ಲಿ ಎಲ್ಲರಿಗೂ ಅವಕಾಸವಿದೆ ಅದನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉನ್ನತ ಸ್ಥಾನ ಪಡೆಯಬೇಕು ಎಂದರು.

ಶಾಲೆಯಲ್ಲಿ ನಡೆದ ವಿದ್ಯಾರ್ಥಿನಾಯಕ ಚುನಾವಣೆಯಲ್ಲಿ ಶಾಲಾನಾಯಕನಾಗಿ ಪೂರ್ಣೇಶ್  ಹತ್ತನೇ ತರಗತಿ  ಆಯ್ಕೆಯಾಗಿರುತ್ತಾರೆ. ಸಭಾಪತಿಯಾಗಿ  ಶಹದಿಯಾ ಹತ್ತನೇ ತರಗತಿ  ಕಲಾಪ ನಡೆಸಿಕೊಟ್ಟರು. ಶಾಲಾ ಮುಖ್ಯೋಪಾಧ್ಯಾಯರಾದ ರಾಧಾಕೃಷ್ಣ ತಚ್ಚಮೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಎಕ್ಸೆಲ್ ಪ.ಪೂ. ಕಾಲೇಜು ಇಲ್ಲಿಯ ಆಡಳಿತಾಧಿಕಾರಿ ಪುರುಷೋತ್ತಮ, ಲೆಕ್ಕಾಧಿಕಾರಿ ಋತೇಶ್, ಪ್ರಾಚೀನ ವಸ್ತು ಸಂಗ್ಹಕಾರ  ಹೈದರಾಲಿ ಹಳ್ಳಿಮನೆ ಉಪಸ್ಥಿತರಿದ್ದರು .

ಶಿಕ್ಷಕರಾದ ಶ್ರೀಮತಿ ಬೇಬಿ ಶ್ರೀಮತಿ ದೀಪ್ತಿ ಹೆಗ್ಡೆ,ಶ್ರೀಮತಿ ಗೀತಾ ಉಡುಪಿ. ಸುಧಾಕರ ಶೆಟ್ಟಿ, ಪ್ರವೀಣ್ ಕುಮಾರ್, ಮೋಹನದಾಸ  ಸಹಕರಿಸಿದರು. ರಾಮಚಂದ್ರ ದೊಡಮನಿ ವಂದಿಸಿದರು.

Related posts

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya
error: Content is protected !!