September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

ವೇಣೂರು: ಟೆಲಿಗ್ರಾಂ ನಕಲಿ ಖಾತೆಯ ಮೂಲಕ ಸಂದೇಶ ಕಳುಹಿಸಿ ಒಂದು ಲಕ್ಷ ಹಣವನ್ನು ವಸೂಲಿಗೈದಿದ್ದ ವಂಚಕನನ್ನು ವೇಣೂರು ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ ಹೆಬ್ಬಾರ್ (23) ಪ್ರಕರಣದ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಘಟನೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ನಿವಾಸಿ, ಪೆರೋಡಿತ್ತಾಯಕಟ್ಟೆ ಶಾಲೆಯ ಶಿಕ್ಷಕಿ ಜ್ಯೋತಿ ಅವರಿಗೆ ನಕಲಿ ಟೆಲಿಗ್ರಾಂ ಖಾತೆಯ ಮೂಲಕ ರೂ. ಮೂರು ಲಕ್ಷ ಕೊಡುವಂತೆ ಬೇಡಿಕೆ ಇಟ್ಟು ಹಣವನ್ನು ನೀಡದಿದ್ದರೆ ಗಂಡನನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಬಗ್ಗೆ ಜ್ಯೋತಿ ಅವರು ವೇಣೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು. ಕಾರ್ಯಾಚರಣೆಗಿಳಿದ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ., ಆನಂದ ಎಂ. ಪೊಲೀಸರ ತಂಡ ಆ. 2ರ ಮಧ್ಯರಾತ್ರಿ ತೆಂಕಕಾರಂದೂರು ಗ್ರಾಮದ ಗುಂಡೇರಿ ಎಂಬಲ್ಲಿಂದ ಬಂಧಿಸಿದ್ದಾರೆ.

3 ಲಕ್ಷದ ಬದಲಿಗೆ ರೂ. ಒಂದು ಲಕ್ಷ ನೀಡುವುದಾಗಿ ಆರೋಪಿಯನ್ನು ಟೆಲಿಗ್ರಾಂನಲ್ಲಿ ಒಪ್ಪಿಸಿ, ಅದರಂತೆ ಆರೋಪಿ ಆ. 2 ರಂದು ಸಂಜೆ ಅಳದಂಗಡಿ ಕೆದ್ದು ಸಮೀಪ ಹಣವನ್ನು ಎಸೆದು ಹೋಗುವಂತೆ ಸೂಚಿಸಿದ್ದ. ಬಳಿಕ ಅಲ್ಲಿ ಎಸೆಯಬೇಡಿ ಎಂದು ಸಂದೇಶ ರವಾಣಿಸಿ ಬೇರೊಂದು ಸ್ಥಳವನ್ನು ಸೂಚಿಸಿದ್ದ. ಹೀಗೆ ಮೂರ್‍ನಾಲ್ಕು ಬಾರಿ ಸ್ಥಳವನ್ನು ಬದಲಾಯಿಸುತ್ತಾ ಮೆಸೇಜ್ ಮಾಡುತ್ತಿದ್ದ ಆರೋಪಿ ಶಿರ್ಲಾಲು ಸವಣಾಲು ಕ್ರಾಸ್ ಬಳಿ ಹಣವನ್ನು ವಾಹನದಿಂದ ಬಿಸಾಡಿ ಹೋಗುವಂತೆ ತಿಳಿಸಿದ್ದು, ಅದರಂತೆ ಹಣದ ಕಟ್ಟನ್ನು ಬಿಸಾಡಿ ಹೋಗಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಕಟ್ಟನ್ನು ಪಡೆದುಕೊಳ್ಳುವಷ್ಟರಲ್ಲಿ ಮೊದಲೇ ಕಾದುಕುಳಿತ್ತಿದ್ದ ಪೊಲೀಸರು ಹಿಡಿಯಲು ಯತ್ನಿಸಿದ್ದಾರೆ. ಆದರೆ ಅಚಾನಕ್ ಆಗಿ ತಪ್ಪಿಸಿಕೊಂಡಿದ್ದ ಆರೋಪಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ, ಕ್ಷಿಪ್ರ ಕಾರ್ಯಾಚರಣೆಗಿಳಿದ ಪೊಲೀಸರು ತಡರಾತ್ರಿ ಆತನ ಅಣ್ಣನ ಮನೆ ಗುಂಡೇರಿ ಸಮೀಪ ದಸ್ತಗಿರಿ ಮಾಡಿ ಆತ ವಸೂಲಿ ಮಾಡಿದ್ದ ಒಂದು ಲಕ್ಷ ನಗದು, ಕೃತ್ಯಕ್ಕೆ ಉಪಯೋಗಿಸಿದ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya
error: Content is protected !!