September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿ ಸುದೀರ್ಘ 37 ವರ್ಷಗಳ ಕಾಲ ಸಾರ್ಥಕ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಸನತ್ ಕುಮಾರ್ ಕೆ ಇವರ ಬೀಳ್ಕೊಡುಗೆ ಸಮಾರಂಭ ಐಟಿಐಯಲ್ಲಿ ಜು.31 ರಂದು ಜರುಗಿತು.


ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ ಆರ್ ವಹಿಸಿ ನಿವೃತ್ತಿ ಹೊಂದುತ್ತಿರುವ ಸನತ್ ಕುಮಾರ್ ರವರ ಕಾರ್ಯ ವೈಖರಿಯನ್ನು ಕೊಂಡಾಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ನಿವೃತ್ತ ಪ್ರಾಚಾರ್ಯರಾದ ಸದಾನಂದ ಪೂಜಾರಿ ಯವರು ಮಾತನಾಡಿ ಸನತ್ ಕುಮಾರ್ ರವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿನರಾಜ್ ಜೈನ್ ಶುಭ ಹಾರೈಸುತ್ತಾ ಹಳೆ ವಿದ್ಯಾರ್ಥಿ ಸಂಘಕ್ಕೆ ಶ್ರೀಯುತರ ಕೊಡುಗೆಯನ್ನು ಸ್ಮರಿಸಿ ಅವರ ಗುಣಗಾನಗೈದರು.
ವೇದಿಕೆಯಲ್ಲಿ ತರಬೇತಿ ಅಧಿಕಾರಿಗಳಾದ ಪೀಟರ್ ಸಿಕ್ವೆರಾ ಹಾಗೂ ಕಚೇರಿ ಅಧೀಕ್ಷಕರಾದ ಉಮೇಶ್ ಕೆ ಉಪಸ್ಥಿತರಿದ್ದರು.


ಸಂಸ್ಥೆಯ ವತಿಯಿಂದ ಸನತ್ ಕುಮಾರ್ ದಂಪತಿಗಳಿಗೆ ಶಾಲು, ಫಲ ಪುಷ್ಪ ದೊಂದಿಗೆ ಬಂಗಾರದ ಉಂಗುರ ಹಾಗೂ ಸನ್ಮಾನ ಪತ್ರವನ್ನು ನೀಡಿ ಅಭಿನಂದಿಸಲಾಯಿತು, ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು. ಸಂಸ್ಥೆಯ ಹಿತೈಷಿ ಹಾಗೂ ಭಾರತೀಯ ಜೀವ ವಿಮಾನ ನಿಗಮದ ಚೇಯರ್ ಮೆನ್ ಕ್ಲಬ್ ಮೆಂಬರ್ ಶ್ರೀ ಜಗನ್ನಾಥ ದೇವಾಡಿಗ ರವರು ಸನತ್ ಕುಮಾರ್ ರವರ ಪೆನ್ಸಿಲ್ ಆರ್ಟ್ ಭಾವಚಿತ್ರವನ್ನು ನೀಡಿ ಅಭಿನಂದಿಸಿದರು.
ಸಿಬ್ಬಂದಿಗಳ ಪರವಾಗಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳಾದ ರತ್ನಾಕರ ರಾವ್ ರವರು ಅಭಿನಂದನಾ ಭಾಷಣಗೈದು ಸಂಸ್ಥೆ ಪ್ರಾರಂಭ ಆದಾಗಿನಿಂದ ಈವರೆಗೆ ನಿಷ್ಠಾವಂತರಾಗಿ ಸೇವೆ ಸಲ್ಲಿಸಿ ಸಂಸ್ಥೆಯ ಹಿರಿಮೆಯನ್ನು ಸನತ್ ಕುಮಾರ್ ರವರು ಹೆಚ್ಚಿಸಿದ್ದಾರೆ ಎಂದರು . ಕಚೇರಿ ಸಿಬ್ಬಂದಿಗಳ ಪರವಾಗಿ ಫಣಿರಾಜ್ ಜೈನ್ ರವರು ಮಾತನಾಡಿ ಕಚೇರಿಯಲ್ಲಿ ತಮ್ಮ ಜೊತೆಗಿನ ಒಡನಾಟವನ್ನು ಸ್ಮರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ತರಬೇತಿ ಅಧಿಕಾರಿ ಶಿವರಾವ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮಾಣಿಕ್ಯ ರಾಜ್ ಜೈನ್ ಉಪಸ್ಥಿತರಿದ್ದರು.


ಕಿರಿಯ ತರಬೇತಿ ಅಧಿಕಾರಿ ನಾಗೇಶ್ ಉಡುಪ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಶ್ರೀಧರ ಡಿ ಸ್ವಾಗತಿಸಿದರು. ಪದ್ಮಪ್ರಸಾದ್ ಬಸ್ತಿ ಕಾರ್ಯಕ್ರಮ ನಿರೂಪಿಸಿ, ರಾಮ ಚಂದ್ರ ಶೆಟ್ಟಿ ಧನ್ಯವಾದ ಸಮರ್ಪಿಸಿದರು.

Related posts

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!