ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಬೆಳ್ತಂಗಡಿ : ಆಟೋ ಚಾಲಕನ ಮೇಲೆ ಅಪರಿಚಿತ ತಂಡವೊಂದು ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಿನ್ನೆ ನಡೆದಿದೆ.


ಹಲ್ಲೆಗೊಳಗಾದ ಆಟೋ ಚಾಲಕ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಬೆಳ್ತಂಗಡಿ ಆಸ್ಪತ್ರೆಗೆ ದಾಖಲಾಗಿ, ಧಮ೯ಸ್ಥಳ‌ ಪೊಲೀಸರಿಗೆ ದೂರು ನೀಡಿದ್ದಾರೆ.


‌‌ಆ.2ರಂದು ರಾತ್ರಿ ಸುಮಾರು 9 ಗಂಟೆಗೆ ರಿಕ್ಷಾ ಚಾಲಕ ಧಮ೯ ಸ್ಥಳದಿಂದ ಉಜಿರೆಗೆ ಬರುತ್ತಿರುವಾಗ ಅಪರಿಚಿತ ಯುವಕರ ತಂಡವೊಂದು ‘ನಿನಗೆ ಡ್ರಾಪ್ ಮಾಡಲು ಹಿಂದೂ ಯುವತಿಯರೇ ಬೇಕಾ’ ಎಂದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

error: Content is protected !!