25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಮೀಸಲಾಗಿದ್ದು,ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ,ಉದ್ಯಮಿ ರತ್ನಾಕರ ಬುಣ್ಣನ್ ಪರಬೆಟ್ಟು ಮರೋಡಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಮೀಸಲಾಗಿದ್ದು ಯುವ ನಾಯಕ, ಸಮಾಜಸೇವಕ ಶುಭರಾಜ್ ಹೆಗ್ಡೆ ಪಾಣಲು ದರ್ಖಾಸು ಮರೋಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಚುನಾವಣಾ ಪಕ್ರೀಯೆಯನ್ನು ನಡೆಸಿಕೊಟ್ಟರು., ಉಪ ಚುನಾವಣಾಧಿಕಾರಿಯಾಗಿ ಮರೋಡಿ ಗ್ರಾಮ ಪಂಚಾಯತ್ ಪಂ.ಅ.ಅಧಿಕಾರಿ ವಾಸುದೇವ ಕೆ.ಜಿ,ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಪದ್ಮಶ್ರೀ ಜೈನ್,ಉಪಾಧ್ಯಕ್ಷ ಯಶೋಧರ ,ಸದಸ್ಯರಾದ ರತ್ನಾಕರ, ಉಮೇಶ,ಅಶೋಕ,ಶುಭರಾಜ ಹೆಗ್ಡೆ,ಧನಲಕ್ಷ್ಮಿ,ಉಮಾವತಿ,ಸಮಿತ,ಸುನಂದ,ಯಶೋಧ ಉಪಸ್ಥಿತರಿದ್ದರು.

ಕಳೆದ ಎರಡೂವರೆ ವರ್ಷದಲ್ಲಿ ಅಧ್ಯಕ್ಷೆ ಪದ್ಮಶ್ರೀ ಜೈನ್,ಉಪಾಧ್ಯಕ್ಷ ಯಶೋಧರ ಆಚಾರ್ಯ ಹಾಗೂ ಸದಸ್ಯರ ನೇತೃತ್ವದಲ್ಲಿ ಗ್ರಾಮದಲ್ಲಿ ಉತ್ತಮ ಕೆಲಸ ಕಾರ್ಯಗಳು ನಡೆದಿದೆ.

Related posts

ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya
error: Content is protected !!