23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಮೀಸಲಾಗಿದ್ದು,ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ,ಉದ್ಯಮಿ ರತ್ನಾಕರ ಬುಣ್ಣನ್ ಪರಬೆಟ್ಟು ಮರೋಡಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಮೀಸಲಾಗಿದ್ದು ಯುವ ನಾಯಕ, ಸಮಾಜಸೇವಕ ಶುಭರಾಜ್ ಹೆಗ್ಡೆ ಪಾಣಲು ದರ್ಖಾಸು ಮರೋಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಚುನಾವಣಾ ಪಕ್ರೀಯೆಯನ್ನು ನಡೆಸಿಕೊಟ್ಟರು., ಉಪ ಚುನಾವಣಾಧಿಕಾರಿಯಾಗಿ ಮರೋಡಿ ಗ್ರಾಮ ಪಂಚಾಯತ್ ಪಂ.ಅ.ಅಧಿಕಾರಿ ವಾಸುದೇವ ಕೆ.ಜಿ,ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಪದ್ಮಶ್ರೀ ಜೈನ್,ಉಪಾಧ್ಯಕ್ಷ ಯಶೋಧರ ,ಸದಸ್ಯರಾದ ರತ್ನಾಕರ, ಉಮೇಶ,ಅಶೋಕ,ಶುಭರಾಜ ಹೆಗ್ಡೆ,ಧನಲಕ್ಷ್ಮಿ,ಉಮಾವತಿ,ಸಮಿತ,ಸುನಂದ,ಯಶೋಧ ಉಪಸ್ಥಿತರಿದ್ದರು.

ಕಳೆದ ಎರಡೂವರೆ ವರ್ಷದಲ್ಲಿ ಅಧ್ಯಕ್ಷೆ ಪದ್ಮಶ್ರೀ ಜೈನ್,ಉಪಾಧ್ಯಕ್ಷ ಯಶೋಧರ ಆಚಾರ್ಯ ಹಾಗೂ ಸದಸ್ಯರ ನೇತೃತ್ವದಲ್ಲಿ ಗ್ರಾಮದಲ್ಲಿ ಉತ್ತಮ ಕೆಲಸ ಕಾರ್ಯಗಳು ನಡೆದಿದೆ.

Related posts

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

Suddi Udaya
error: Content is protected !!