ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ


ಕೊಯ್ಯೂರು : ಸರಕಾರಿ ಪ್ರೌಢಶಾಲೆ ಕೊಯ್ಯೂರು ಇಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಶಾಲಾ ಪಾರ್ಲಿಮೆಂಟ್  ಉದ್ಘಾಟನೆ  ಇತ್ತೀಚೆಗೆ ನಡೆಯಿತು. 

ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇದರ ಅಧ್ಯಕ್ಷ ಸುಮಂತ್ ಜೈನ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಂತ್ರಿಮಂಡಲದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.ಬಳಿಕ  ನಡೆದ ಅಣಕು ಪಾರ್ಲಿಮೆಂಟ್ ನಲ್ಲಿ ರಾಷ್ಟ್ರಪತಿ ಭಾಷಣ ಮಾಡಿದರು. ನಂತರ ನಡೆದ ಕಲಾಪವನ್ನು ವೀಕ್ಷಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಕುರಿತು ಭಾಷಣ ಮಾಡುತ್ತಾ  ರಾಜಕೀಯ ಒಂದು ಉದ್ಯೋಗವಾಗಬಾರದು  ಅದೊಂದು ಜವಾಬ್ಧಾರಿಯಾಗಿದೆ. ನಾಯಕ ಯಾವತ್ತೂ ಸ್ಥಾನದಿಂದ ಆಗಬಾರದು ಬದಲಾಗಿ ಆತನ ನಡವಳಿಕೆಯಿಂದ ಆಗಬೇಕು.ಶಿಕ್ಷಣದ ಬೇರು ಕಹಿ ಆದರೂ ಅದರ ಫಲ  ಎಂದಿಗೂ ಸಿಹಿಯಾಗಿರುತ್ತದೆ. ಸಂವಿಧಾನದಲ್ಲಿ ಎಲ್ಲರಿಗೂ ಅವಕಾಸವಿದೆ ಅದನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉನ್ನತ ಸ್ಥಾನ ಪಡೆಯಬೇಕು ಎಂದರು.

ಶಾಲೆಯಲ್ಲಿ ನಡೆದ ವಿದ್ಯಾರ್ಥಿನಾಯಕ ಚುನಾವಣೆಯಲ್ಲಿ ಶಾಲಾನಾಯಕನಾಗಿ ಪೂರ್ಣೇಶ್  ಹತ್ತನೇ ತರಗತಿ  ಆಯ್ಕೆಯಾಗಿರುತ್ತಾರೆ. ಸಭಾಪತಿಯಾಗಿ  ಶಹದಿಯಾ ಹತ್ತನೇ ತರಗತಿ  ಕಲಾಪ ನಡೆಸಿಕೊಟ್ಟರು. ಶಾಲಾ ಮುಖ್ಯೋಪಾಧ್ಯಾಯರಾದ ರಾಧಾಕೃಷ್ಣ ತಚ್ಚಮೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಎಕ್ಸೆಲ್ ಪ.ಪೂ. ಕಾಲೇಜು ಇಲ್ಲಿಯ ಆಡಳಿತಾಧಿಕಾರಿ ಪುರುಷೋತ್ತಮ, ಲೆಕ್ಕಾಧಿಕಾರಿ ಋತೇಶ್, ಪ್ರಾಚೀನ ವಸ್ತು ಸಂಗ್ಹಕಾರ  ಹೈದರಾಲಿ ಹಳ್ಳಿಮನೆ ಉಪಸ್ಥಿತರಿದ್ದರು .

ಶಿಕ್ಷಕರಾದ ಶ್ರೀಮತಿ ಬೇಬಿ ಶ್ರೀಮತಿ ದೀಪ್ತಿ ಹೆಗ್ಡೆ,ಶ್ರೀಮತಿ ಗೀತಾ ಉಡುಪಿ. ಸುಧಾಕರ ಶೆಟ್ಟಿ, ಪ್ರವೀಣ್ ಕುಮಾರ್, ಮೋಹನದಾಸ  ಸಹಕರಿಸಿದರು. ರಾಮಚಂದ್ರ ದೊಡಮನಿ ವಂದಿಸಿದರು.

Related posts

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya
error: Content is protected !!