23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

ಕಕ್ಕಿಂಜೆ: ಚಾರ್ಮಾಡಿ ಗ್ರಾಮ ಪಂಚಾಯತ್ ಮಟ್ಟದ ಸುಸ್ಥಿರ ಅಭಿವೃದ್ಧಿ ಗುರಿಗಳು ಹಾಗೂ ಮಕ್ಕಳ ಹಕ್ಕುಗಳ ಒಡಂಬಡಿಕೆಯ ತರಬೇತಿ ಕಾರ್ಯಕ್ರಮವು ಆ. 02ರಂದು ಚಾರ್ಮಾಡಿ ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಆಡಳಿತದಲ್ಲಿ ಮಕ್ಕಳು ಯೋಜನೆಯ ಅಂಗವಾಗಿ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ಕಲ್ಲಾಜೆ ಮಾತನಾಡಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು, ಮಕ್ಕಳ ಹಕ್ಕುಗಳ ಒಡಂಬಡಿಕೆ, ಮಕ್ಕಳ ಹಕ್ಕುಗಳ ಗ್ರಾಮ ಸಭೆ, ಮಕ್ಕಳ ಹಕ್ಕುಗಳ ಸಂಘ, ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ, ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆ ಬಗ್ಗೆ ವಿವರಿಸಿ ನಮ್ಮ ಮಕ್ಕಳಿಗೆ ಸುಸ್ಥಿರ ಸಮಾಜ ನಿರ್ಮಾಣ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಆಡಳಿತದಲ್ಲಿ ಮಕ್ಕಳು ಯೋಜನೆಯ ಅಂಗವಾಗಿ ಹೊರತಂದಿರುವ ‘ಮಕ್ಕಳ ಹಕ್ಕುಗಳ ಗ್ರಾಮಸಭೆ’ ಮತ್ತು ‘ಗ್ರಾಮ ಪಂಚಾಯತ್ ಕಾಯಿದೆ ಮತ್ತು ಮಕ್ಕಳು’ ಭಿತ್ತಿಪತ್ರಗಳನ್ನು ಪಂಚಾಯತ್ ಅಧ್ಯಕ್ಷ ಕೆ.ವಿ.ಪ್ರಸಾದ್ , ಉಪಾಧ್ಯಕ್ಷರಾದ ಶ್ರೀಮತಿ ಸುರೇಖಾ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ.ಜಿ ಹಾಗೂ ಸದಸ್ಯರು ಬಿಡುಗಡೆಗೊಳಿಸಿದರು.

Related posts

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!