26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿ ಸುದೀರ್ಘ 37 ವರ್ಷಗಳ ಕಾಲ ಸಾರ್ಥಕ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಸನತ್ ಕುಮಾರ್ ಕೆ ಇವರ ಬೀಳ್ಕೊಡುಗೆ ಸಮಾರಂಭ ಐಟಿಐಯಲ್ಲಿ ಜು.31 ರಂದು ಜರುಗಿತು.


ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ ಆರ್ ವಹಿಸಿ ನಿವೃತ್ತಿ ಹೊಂದುತ್ತಿರುವ ಸನತ್ ಕುಮಾರ್ ರವರ ಕಾರ್ಯ ವೈಖರಿಯನ್ನು ಕೊಂಡಾಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ನಿವೃತ್ತ ಪ್ರಾಚಾರ್ಯರಾದ ಸದಾನಂದ ಪೂಜಾರಿ ಯವರು ಮಾತನಾಡಿ ಸನತ್ ಕುಮಾರ್ ರವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿನರಾಜ್ ಜೈನ್ ಶುಭ ಹಾರೈಸುತ್ತಾ ಹಳೆ ವಿದ್ಯಾರ್ಥಿ ಸಂಘಕ್ಕೆ ಶ್ರೀಯುತರ ಕೊಡುಗೆಯನ್ನು ಸ್ಮರಿಸಿ ಅವರ ಗುಣಗಾನಗೈದರು.
ವೇದಿಕೆಯಲ್ಲಿ ತರಬೇತಿ ಅಧಿಕಾರಿಗಳಾದ ಪೀಟರ್ ಸಿಕ್ವೆರಾ ಹಾಗೂ ಕಚೇರಿ ಅಧೀಕ್ಷಕರಾದ ಉಮೇಶ್ ಕೆ ಉಪಸ್ಥಿತರಿದ್ದರು.


ಸಂಸ್ಥೆಯ ವತಿಯಿಂದ ಸನತ್ ಕುಮಾರ್ ದಂಪತಿಗಳಿಗೆ ಶಾಲು, ಫಲ ಪುಷ್ಪ ದೊಂದಿಗೆ ಬಂಗಾರದ ಉಂಗುರ ಹಾಗೂ ಸನ್ಮಾನ ಪತ್ರವನ್ನು ನೀಡಿ ಅಭಿನಂದಿಸಲಾಯಿತು, ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು. ಸಂಸ್ಥೆಯ ಹಿತೈಷಿ ಹಾಗೂ ಭಾರತೀಯ ಜೀವ ವಿಮಾನ ನಿಗಮದ ಚೇಯರ್ ಮೆನ್ ಕ್ಲಬ್ ಮೆಂಬರ್ ಶ್ರೀ ಜಗನ್ನಾಥ ದೇವಾಡಿಗ ರವರು ಸನತ್ ಕುಮಾರ್ ರವರ ಪೆನ್ಸಿಲ್ ಆರ್ಟ್ ಭಾವಚಿತ್ರವನ್ನು ನೀಡಿ ಅಭಿನಂದಿಸಿದರು.
ಸಿಬ್ಬಂದಿಗಳ ಪರವಾಗಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳಾದ ರತ್ನಾಕರ ರಾವ್ ರವರು ಅಭಿನಂದನಾ ಭಾಷಣಗೈದು ಸಂಸ್ಥೆ ಪ್ರಾರಂಭ ಆದಾಗಿನಿಂದ ಈವರೆಗೆ ನಿಷ್ಠಾವಂತರಾಗಿ ಸೇವೆ ಸಲ್ಲಿಸಿ ಸಂಸ್ಥೆಯ ಹಿರಿಮೆಯನ್ನು ಸನತ್ ಕುಮಾರ್ ರವರು ಹೆಚ್ಚಿಸಿದ್ದಾರೆ ಎಂದರು . ಕಚೇರಿ ಸಿಬ್ಬಂದಿಗಳ ಪರವಾಗಿ ಫಣಿರಾಜ್ ಜೈನ್ ರವರು ಮಾತನಾಡಿ ಕಚೇರಿಯಲ್ಲಿ ತಮ್ಮ ಜೊತೆಗಿನ ಒಡನಾಟವನ್ನು ಸ್ಮರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ತರಬೇತಿ ಅಧಿಕಾರಿ ಶಿವರಾವ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮಾಣಿಕ್ಯ ರಾಜ್ ಜೈನ್ ಉಪಸ್ಥಿತರಿದ್ದರು.


ಕಿರಿಯ ತರಬೇತಿ ಅಧಿಕಾರಿ ನಾಗೇಶ್ ಉಡುಪ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಶ್ರೀಧರ ಡಿ ಸ್ವಾಗತಿಸಿದರು. ಪದ್ಮಪ್ರಸಾದ್ ಬಸ್ತಿ ಕಾರ್ಯಕ್ರಮ ನಿರೂಪಿಸಿ, ರಾಮ ಚಂದ್ರ ಶೆಟ್ಟಿ ಧನ್ಯವಾದ ಸಮರ್ಪಿಸಿದರು.

Related posts

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!