30.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

ಬೆಳ್ತಂಗಡಿ: ಅಧಿಕಾರಿಗಳಿಂದ ಬಡ ಕುಟುಂಬದವರಾದ ನಮಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಆ.4 ರಂದು ಬೆಳ್ತಂಗಡಿ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಗಿರಿಯಪ್ಪ ಗೌಡ ನಾಗನಡ್ಕ ಹೇಳಿದರು.

ನಾವು ಶಿಶಿಲ ಗ್ರಾಮದ ನಾಗನಡ್ಕ ಎಂಬಲ್ಲಿ ಸಣ್ಣ ಮನೆ ಕಟ್ಟಿ ವಾಸಿಸುತ್ತಿದ್ದು, ನಮಗೆ ಯಾವುದೇ ಕೃಷಿ ಭೂಮಿಯಾಗಲಿ ಯಾವುದೇ ಆಸ್ತಿಯಾಗಲಿ ಇರುವುದಿಲ್ಲ, ನಮಗೆ ಒಂದು ಮನೆ ಬಿಟ್ಟರೆ ಬೇರೆ ಏನು ಇಲ್ಲ, ನಮಗಿಬ್ಬರಿಗೂ ಕೂಲಿ ಕೆಲಸ ಮಾಡಲು ಆರೋಗ್ಯ ಸಮಸ್ಯೆ ಇರುವ ಕಾರಣ ಮನೆಯ ಪಕ್ಕದಲ್ಲಿ ಜಾಗದಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದು, ಇದನ್ನು ಸಹಿಸಲಾಗದ ಕಾಂಗ್ರೆಸ್ ಕಾಯ೯ಕತ೯ ದ್ವೇಷದಿಂದ ನಮ್ಮ ಕೋಳಿ ಮಾಂಸದ ಅಂಗಡಿಯಿಂದ ಯಾವುದೇ ಸಮಸ್ಯೆಯಿಲ್ಲದಿದ್ದರೂ ಅಧಿಕಾರಿಗಳಿಗೆ ದೂರು ನೀಡಿ, ಅಧಿಕಾರಿಗಳು ನಮ್ಮ ಮನೆಗೆ ಪದೇ ಪದೇ ಬಂದು ನಮ್ಮ ಅಂಗಡಿಯನ್ನು ಬಂದ್ ಮಾಡಿ ಇಲ್ಲದಿದ್ದರೆ ನಿಮ್ಮ ಮೇಲೆ ಕೇಸು ಹಾಕುತ್ತೇವೆ ಎಂದು ನೋಟಿಸ್‌ ನೀಡುತ್ತಿದ್ದು, ಇದನ್ನು ಸಹಿಸಲಾಗದೆ ನಾವು ನಮ್ಮ ಅಂಗಡಿಯನ್ನು ಬಂದ್ ಮಾಡಿದೆವು. ಮುಂದೆ ನಮ್ಮ ಮನೆಯ ಪಕ್ಕದಲ್ಲಿ ಜೋಸ್ ಅಬ್ರಹಾಂ ಎಂಬುವವರು ತಮ್ಮ ಪಟ್ಟಾ ಜಮೀನಿನಲ್ಲಿ ಹೊಸ ಕೋಳಿ ಅಂಗಡಿ ಮಾಡಿಕೊಟ್ಟು ನನ್ನನ್ನು ಕೆಲಸಕ್ಕೆ ನಿಲ್ಲಿಸಿದರು ಇದನ್ನೂ ಸಹಿಸಲಾಗದ ಕಾಂಗ್ರೆಸ್ ಕಾರ್ಯಕರ್ತ ಅಂಗಡಿ ಕೂಡ ರಸ್ತೆ ಮಾರ್ಜಿನಲ್ಲಿದೆ. ಇದನ್ನು ತೆರವುಗೊಳಿಸಬೇಕೆಂದು ಒತ್ತಡ ತರುತ್ತಿದ್ದಾರೆ.‌

ಸಂಬಂಧ ಪಟ್ಟ ಇಲಾಖೆಯವರು ಭೇಟಿ ನೀಡಿ ಸ್ಥಳ ಪರಿಶೀಲಿಸಿ ಎಲ್ಲ ಕಟ್ಟಡ ದಾಖಲಾತಿ ಸರಿಯಾಗಿದೆ ಎಂದು ತಿಳಿಸಿದ್ದಾರೆ. ಆದರೂ ಅಧಿಕಾರಿಗಳ ಮೂಲಕ ನಮಗೆ ಮಾನಸಿಕ ಒತ್ತಡ ನೀಡಲಾಗುತ್ತಿದೆ . ಎರಡು ದಿನದ ಹಿಂದೆ ಪೋಲಿಸ್‌ ಠಾಣೆಯಲ್ಲಿ ನಾನು ಕೋಳಿ ಅಂಗಡಿಯ ತ್ಯಾಜ್ಯವನ್ನು ಸರಿಯಾಗಿ ನಿರ್ವಾಹಿಸುತ್ತಿಲ್ಲ. ದೂರು ನೀಡಲಾಗಿದ್ದು , ನನಗೆ ಪೊಲೀಸ್ ನವರ ಮೂಲಕ ಒತ್ತಡ ತರಿಸುವ ಕೆಲಸ ಮಾಡಿದ್ದಾರೆ,
ಆದರೆ ಈ ರೀತಿ ಕಿರುಕುಳ ನೀಡಿ ನಮ್ಮ ಜೀವನ ನಡೆಸದಂತೆ ಮಾಡುತ್ತಿರುವುದ ತುಂಬಾ ಬೇಸರವಾಗಿ ಎಂದರು.

ಪ್ರತಿಕಾಗೋಷ್ಠಿಯಲ್ಲಿ ಕರುಣಾಕರ ಶಿಶಿಲ, ಲಲಿತಾ, ಆನಂದ ಪೂಜಾರಿ, ಜಗದೀಶ ಪೂಜಾರಿ ಉಪಸ್ಥಿತರಿದ್ದರು.

Related posts

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya
error: Content is protected !!