27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

ಉಜಿರೆ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಉಜಿರೆ ಶ್ರೀ ಜನಾರ್ಧನ ಸ್ವಾಮಿ ರಥಬೀದಿಯಿಂದ ಪ್ರಾರಂಭಗೊಂಡು ಕಾಲೇಜು ರಸ್ತೆ ಯವರೆಗೆ ಬೃಹತ್ ಸಮಾವೇಶ-ಜಾಥ ಹಾಗೂ ಹಕ್ಕೊತ್ತಾಯ ಮಂಡನೆಯು ಆ.4 ರಂದು ನಡೆಯಿತು.

ಶ್ರೀ ಧರ್ಮಸ್ಥಳ ಯೋಜನೆಯ ಕಾರ್ಯನಿರ್ವಾಹಕ ಡಾ| ಎಲ್.ಹೆಚ್ ಮಂಜುನಾಥ್ ಪ್ರಸ್ತಾವನೆ ನೆರವೇರಿಸಿದರು, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಹಾಗೂ ಲಯನ್ಸ್ ಅಧ್ಯಕ್ಷ ಜಯರಾಜ್ ಹೊಸಕೋಟೆ ಅಭಿಪ್ರಾಯ ಮಂಡನೆ ಮಾಡಿದರು.

ವೇದಿಕೆಯಲ್ಲಿ ಮೂಡಬಿದ್ರೆ ಮಾಜಿ ಸಚಿವ ಅಭಯಚಂದ್ರ, ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಜಿರೆ ಜನಾರ್ದನ ದೇವಸ್ಥಾನ ದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಂದರ ಗೌಡ ಇಚ್ಚಿಲ, ಕಾಸಿಂ ಮಲ್ಲಿಗೆ ಮನೆ ಉಪಸ್ಥಿತರಿದ್ದರು.

ಧರ್ಮಸ್ಥಳ ಸುಬ್ರಹ್ಮಣ್ಯ ಪ್ರಸಾದ್ ರವರಿಂದ ಹಕ್ಕೊತ್ತಾಯ ಮಂಡನೆ ಮಾಡಿದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಘ ಸಂಸ್ಥೆಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya
error: Content is protected !!