July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

ಮಿತ್ತಬಾಗಿಲು : ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಭಕ್ತರ ಹಾಗೂ ಊರ ಹಾಗೂ ಪರವೂರ ದಾನಿಗಳ ಸಹಕಾರದಲ್ಲಿ ನಡೆಯುತ್ತಿದ್ದು, ದೇವಸ್ಥಾನದ ಈ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರೂ. 10 ಲಕ್ಷ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಅವರು ರೂ.೧೦ ಲಕ್ಷದ ಚೆಕ್‌ನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೇನೇಜಿ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಸೇವಾ ಪ್ರತಿನಿಧಿ ಲತಾ ಹಾಗೂ ಇತರರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ವಿನಯಚಂದ್ರ, ಕೇಶವ ಎಂ.ಕೆ, ಶ್ರೀಮತಿ ವನಿತಾ, ಶ್ರೀಮತಿ ಜ್ಯೋತಿ ಲಕ್ಷ್ಮೀ, ವಿನಯಚಂದ್ರ, ದಾಸಪ್ಪ ಗೌಡ, ದಿನೇಶ್ ಗೌಡ, ಚಂದ್ರಶೇಖರ್, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಬಿ.ಕೆ.ರಾಜಶೇಖರ ರಾವ್, ಸಲಹೆಗಾರ ಬಿ.ಕೆ. ಧನಂಜಯ ರಾವ್, ಅಶೋಕ್ ಕಡಿರುದ್ಯಾವರ, ಶೀನಪ್ಪ ಗೌಡ ದಿಡುಪೆ, ಗೋಪಾಲ ಕೊಲ್ಲಿ, ಸುಧಾಕರ ಕೊಲ್ಲಿ, ಸಿದ್ಧಪ್ಪ ಪೂಜಾರಿ, ರಾಮಣ್ಣ ಕುಂಬಾರ, ಕೃಷ್ಣ ಗೌಡ, ಶೇಖರ ಪೂಜಾರಿ, ಡಿ. ವಿಜಯ ಪೂಜಾರಿ, ಶ್ರೀಧರ ಪೂಜಾರಿ, ದೇವಸ್ಥಾನದ ಸಿಬ್ಬಂದಿ ಬಾಲಕೃಷ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya
error: Content is protected !!