25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

ಬೆಳ್ತಂಗಡಿ : ತಾಲೂಕಿನ ಎಲ್ಲಾ ಜಾತಿ ಧರ್ಮಗಳ ಜನರು ಪರಸ್ಪರ ಸ್ನೇಹ ಸೌಹಾರ್ದತೆ ಸಾಮರಸ್ಯ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ಕ್ಷುಲ್ಲಕ ಕಾರಣ ನೀಡಿ ಶಾಂತಿ ಸೌಹಾರ್ದತೆ ಕೆಡಿಸುವ ಪ್ರಯತ್ನ, ನೈತಿಕ ಪೋಲೀಸ್‌ಗಿರಿ ಹಾಗೂ ಅಲ್ಪಸಂಖ್ಯಾತ ಸಮುದಾಯದ ಜನರ ಮೇಲೆ ದೌರ್ಜನ್ಯ ಮೊದಲಾದ ಕೃತ್ಯಗಳು ತಾಲೂಕಿನ ವಿವಿಧೆಡೆ ನಡೆಯುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ.
ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ತಹಶೀಲ್ದಾರ ಮೂಲಕ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್‌ವೈಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಬಿ ಮುಹಮ್ಮದ್ ಸಾದಿಕ್ ಮಾಸ್ಟರ್ ಮಲೆಬೆಟ್ಟು, ಎಸ್‌ವೈಎಸ್ ಬೆಳ್ತಂಗಡಿ ಝೋನ್ ಅಧ್ಯಕ್ಷ ಕಾಸಿಂ ಮುಸ್ಲಿಯಾರ್ ಮಾಚಾರು, ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ, ಸಾಂತ್ವನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಸದಸ್ಯರಾದ ಸಿದ್ದೀಖ್ ಪರಪ್ಪು, ಅಯ್ಯೂಬ್ ಮಹ್ಲರಿ ಕಾವಳಕಟ್ಟೆ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಶಾಫಿ ಮದನಿ ಪಾಂಡವರಕಲ್ಲು, ಪ್ರಧಾನ ಕಾರ್ಯದರ್ಶಿ ನವಾಝ್ ಜಾರಿಗೆಬೈಲು, ಸದಸ್ಯ ಇಮ್ತಿಯಾಝ್ ಅಹ್ಸನಿ ಮಲೆಬೆಟ್ಟು ಮತ್ತಿತರರು ಹಾಜರಿದ್ದರು.

Related posts

ತೆಕ್ಕಾರುನಲ್ಲಿ ಗುಡ್ಡ ಜರಿದು ಅಪಾರ ಹಾನಿ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!