September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

ಬೆಳ್ತಂಗಡಿ : ತಾಲೂಕಿನ ಎಲ್ಲಾ ಜಾತಿ ಧರ್ಮಗಳ ಜನರು ಪರಸ್ಪರ ಸ್ನೇಹ ಸೌಹಾರ್ದತೆ ಸಾಮರಸ್ಯ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ಕ್ಷುಲ್ಲಕ ಕಾರಣ ನೀಡಿ ಶಾಂತಿ ಸೌಹಾರ್ದತೆ ಕೆಡಿಸುವ ಪ್ರಯತ್ನ, ನೈತಿಕ ಪೋಲೀಸ್‌ಗಿರಿ ಹಾಗೂ ಅಲ್ಪಸಂಖ್ಯಾತ ಸಮುದಾಯದ ಜನರ ಮೇಲೆ ದೌರ್ಜನ್ಯ ಮೊದಲಾದ ಕೃತ್ಯಗಳು ತಾಲೂಕಿನ ವಿವಿಧೆಡೆ ನಡೆಯುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ.
ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ತಹಶೀಲ್ದಾರ ಮೂಲಕ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್‌ವೈಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಬಿ ಮುಹಮ್ಮದ್ ಸಾದಿಕ್ ಮಾಸ್ಟರ್ ಮಲೆಬೆಟ್ಟು, ಎಸ್‌ವೈಎಸ್ ಬೆಳ್ತಂಗಡಿ ಝೋನ್ ಅಧ್ಯಕ್ಷ ಕಾಸಿಂ ಮುಸ್ಲಿಯಾರ್ ಮಾಚಾರು, ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ, ಸಾಂತ್ವನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಸದಸ್ಯರಾದ ಸಿದ್ದೀಖ್ ಪರಪ್ಪು, ಅಯ್ಯೂಬ್ ಮಹ್ಲರಿ ಕಾವಳಕಟ್ಟೆ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಶಾಫಿ ಮದನಿ ಪಾಂಡವರಕಲ್ಲು, ಪ್ರಧಾನ ಕಾರ್ಯದರ್ಶಿ ನವಾಝ್ ಜಾರಿಗೆಬೈಲು, ಸದಸ್ಯ ಇಮ್ತಿಯಾಝ್ ಅಹ್ಸನಿ ಮಲೆಬೆಟ್ಟು ಮತ್ತಿತರರು ಹಾಜರಿದ್ದರು.

Related posts

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ನಿಡ್ಲೆ: ಹೇಮಲತಾ ಕೆ. ಎಸ್. ಸನಿಲ ನಿಧನ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya
error: Content is protected !!