25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

ಮಿತ್ತಬಾಗಿಲು : ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಭಕ್ತರ ಹಾಗೂ ಊರ ಹಾಗೂ ಪರವೂರ ದಾನಿಗಳ ಸಹಕಾರದಲ್ಲಿ ನಡೆಯುತ್ತಿದ್ದು, ದೇವಸ್ಥಾನದ ಈ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರೂ. 10 ಲಕ್ಷ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಅವರು ರೂ.೧೦ ಲಕ್ಷದ ಚೆಕ್‌ನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೇನೇಜಿ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಸೇವಾ ಪ್ರತಿನಿಧಿ ಲತಾ ಹಾಗೂ ಇತರರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ವಿನಯಚಂದ್ರ, ಕೇಶವ ಎಂ.ಕೆ, ಶ್ರೀಮತಿ ವನಿತಾ, ಶ್ರೀಮತಿ ಜ್ಯೋತಿ ಲಕ್ಷ್ಮೀ, ವಿನಯಚಂದ್ರ, ದಾಸಪ್ಪ ಗೌಡ, ದಿನೇಶ್ ಗೌಡ, ಚಂದ್ರಶೇಖರ್, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಬಿ.ಕೆ.ರಾಜಶೇಖರ ರಾವ್, ಸಲಹೆಗಾರ ಬಿ.ಕೆ. ಧನಂಜಯ ರಾವ್, ಅಶೋಕ್ ಕಡಿರುದ್ಯಾವರ, ಶೀನಪ್ಪ ಗೌಡ ದಿಡುಪೆ, ಗೋಪಾಲ ಕೊಲ್ಲಿ, ಸುಧಾಕರ ಕೊಲ್ಲಿ, ಸಿದ್ಧಪ್ಪ ಪೂಜಾರಿ, ರಾಮಣ್ಣ ಕುಂಬಾರ, ಕೃಷ್ಣ ಗೌಡ, ಶೇಖರ ಪೂಜಾರಿ, ಡಿ. ವಿಜಯ ಪೂಜಾರಿ, ಶ್ರೀಧರ ಪೂಜಾರಿ, ದೇವಸ್ಥಾನದ ಸಿಬ್ಬಂದಿ ಬಾಲಕೃಷ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!