24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

ಮಿತ್ತಬಾಗಿಲು : ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಭಕ್ತರ ಹಾಗೂ ಊರ ಹಾಗೂ ಪರವೂರ ದಾನಿಗಳ ಸಹಕಾರದಲ್ಲಿ ನಡೆಯುತ್ತಿದ್ದು, ದೇವಸ್ಥಾನದ ಈ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರೂ. 10 ಲಕ್ಷ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಅವರು ರೂ.೧೦ ಲಕ್ಷದ ಚೆಕ್‌ನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೇನೇಜಿ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಸೇವಾ ಪ್ರತಿನಿಧಿ ಲತಾ ಹಾಗೂ ಇತರರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ವಿನಯಚಂದ್ರ, ಕೇಶವ ಎಂ.ಕೆ, ಶ್ರೀಮತಿ ವನಿತಾ, ಶ್ರೀಮತಿ ಜ್ಯೋತಿ ಲಕ್ಷ್ಮೀ, ವಿನಯಚಂದ್ರ, ದಾಸಪ್ಪ ಗೌಡ, ದಿನೇಶ್ ಗೌಡ, ಚಂದ್ರಶೇಖರ್, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಬಿ.ಕೆ.ರಾಜಶೇಖರ ರಾವ್, ಸಲಹೆಗಾರ ಬಿ.ಕೆ. ಧನಂಜಯ ರಾವ್, ಅಶೋಕ್ ಕಡಿರುದ್ಯಾವರ, ಶೀನಪ್ಪ ಗೌಡ ದಿಡುಪೆ, ಗೋಪಾಲ ಕೊಲ್ಲಿ, ಸುಧಾಕರ ಕೊಲ್ಲಿ, ಸಿದ್ಧಪ್ಪ ಪೂಜಾರಿ, ರಾಮಣ್ಣ ಕುಂಬಾರ, ಕೃಷ್ಣ ಗೌಡ, ಶೇಖರ ಪೂಜಾರಿ, ಡಿ. ವಿಜಯ ಪೂಜಾರಿ, ಶ್ರೀಧರ ಪೂಜಾರಿ, ದೇವಸ್ಥಾನದ ಸಿಬ್ಬಂದಿ ಬಾಲಕೃಷ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya
error: Content is protected !!