25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

ಬೆಳ್ತಂಗಡಿ : ತಾಲೂಕಿನ ಎಲ್ಲಾ ಜಾತಿ ಧರ್ಮಗಳ ಜನರು ಪರಸ್ಪರ ಸ್ನೇಹ ಸೌಹಾರ್ದತೆ ಸಾಮರಸ್ಯ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ಕ್ಷುಲ್ಲಕ ಕಾರಣ ನೀಡಿ ಶಾಂತಿ ಸೌಹಾರ್ದತೆ ಕೆಡಿಸುವ ಪ್ರಯತ್ನ, ನೈತಿಕ ಪೋಲೀಸ್‌ಗಿರಿ ಹಾಗೂ ಅಲ್ಪಸಂಖ್ಯಾತ ಸಮುದಾಯದ ಜನರ ಮೇಲೆ ದೌರ್ಜನ್ಯ ಮೊದಲಾದ ಕೃತ್ಯಗಳು ತಾಲೂಕಿನ ವಿವಿಧೆಡೆ ನಡೆಯುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ.
ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ತಹಶೀಲ್ದಾರ ಮೂಲಕ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್‌ವೈಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಬಿ ಮುಹಮ್ಮದ್ ಸಾದಿಕ್ ಮಾಸ್ಟರ್ ಮಲೆಬೆಟ್ಟು, ಎಸ್‌ವೈಎಸ್ ಬೆಳ್ತಂಗಡಿ ಝೋನ್ ಅಧ್ಯಕ್ಷ ಕಾಸಿಂ ಮುಸ್ಲಿಯಾರ್ ಮಾಚಾರು, ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ, ಸಾಂತ್ವನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಸದಸ್ಯರಾದ ಸಿದ್ದೀಖ್ ಪರಪ್ಪು, ಅಯ್ಯೂಬ್ ಮಹ್ಲರಿ ಕಾವಳಕಟ್ಟೆ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಶಾಫಿ ಮದನಿ ಪಾಂಡವರಕಲ್ಲು, ಪ್ರಧಾನ ಕಾರ್ಯದರ್ಶಿ ನವಾಝ್ ಜಾರಿಗೆಬೈಲು, ಸದಸ್ಯ ಇಮ್ತಿಯಾಝ್ ಅಹ್ಸನಿ ಮಲೆಬೆಟ್ಟು ಮತ್ತಿತರರು ಹಾಜರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!