ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಉಜಿರೆ:ಸಾರ್ವಜನಕ ಶ್ರೀ ಗಣೇಶೋತ್ಸವ ಸಮಿತಿ ಶಾರದಾ ಮಂಟಪ ಉಜಿರೆ ಇದರ ವತಿಯಿಂದ ನಡೆಯುವ ಶ್ರೀ ಗಣೇಶೋತ್ಸವದ ಪೂರ್ವಾಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಆಗಷ್ಟ್ 3 ರಂದು ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆಯಿತು.

ಸೆಪ್ಟೆಂಬರ್ 19 ರಿಂದ ಸೆಪ್ಟೆಂಬರ್ 21 ರವರೆಗೆ ಶಾರದ ಮಂಟಪದಲ್ಲಿ ನಡೆಯಲಿರುವ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವಾಧ್ಯಕ್ಷರಾದ ಶರತ್ ಕೃಷ್ಣ ಪಡ್ವೆಟ್ನಾಯರು ಮತ್ತು ಉಜಿರೆ ಗ್ರಾ.ಪಂ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಅವರು ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಸಂಚಾಲಕರಾದ ಮೋಹನ್ ಕುಮಾರ್, ಕಳೆದ ಬಾರಿಯ ಅಧ್ಯಕ್ಷರಾದ ಅರವಿಂದ ಕಾರಂತ್, ಸಂಚಾಲಕರಾದ ಪ್ರಕಾಶ್ ಅಪ್ರಮೆಯ, ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಮಣ್ಣಗೌಡ, ಕಾರ್ಯದರ್ಶಿ ಪ್ರವೀಣ್, ಕೋಶಾಧಿಕಾರಿ ಧೀರಾಜ್ ಉಪಸ್ಥಿತರಿದ್ದರು.ಕುಮಾರಿ ಇಂಚರ ಕಾರಂತ ಪ್ರಾರ್ಥನೆ ಹಾಡಿದರು.ಪ್ರಸಾದ್ ಬಿ.ಎಸ್ ಮತ್ತು ಗೋಪಾಲಕೃಷ್ಣ ರವರು ಕಾರ್ಯಕ್ರಮ ನಿರೂಪಿಸಿದರು. ಮಮತಾ ವಂದಿಸಿದರು.

Leave a Comment

error: Content is protected !!